ದೆಹಲಿಯಲ್ಲಿ ಸ್ಫೋಟ : ಮೈಸೂರಿನಲ್ಲಿ ಬಿಗಿ ಭದ್ರತೆ

Security beefed up in Mysore
ಮೈಸೂರು, ಸೆ. 8 : ನವದೆಹಲಿಯಲ್ಲಿ ಸೆ.7ರಂದು ನಡೆದ ಬಾಂಬ್ ಸ್ಪೋಟದ ನಂತರ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನ್ನು ಬಿಗಿಗೊಳಿಸಲಾಗಿದೆ. ದಸರಾ ಹತ್ತಿರ ಬರುತ್ತಿರುವುದರಿಂದ ಕಟ್ಟೆಚ್ಚರದಲ್ಲಿರುವ ಪೊಲೀಸರು ನಗರವನ್ನು ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕೆಆರ್‌ಎಸ್ ಸೇರಿದಂತೆ ನಗರದ ನ್ಯಾಯಾಲಯ, ಅರಮನೆ, ಚಾಮುಂಡಿಬೆಟ್ಟ, ಮೃಗಾಲಯ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಜನಸಂದಣಿಯಿರುವ ಸ್ಥಳಗಳಲ್ಲಿ ಶಸ್ತ್ರಸಜ್ಜಿತ ಕೆಎಸ್‌ಆರ್‌ಪಿ, ನಗರ ಸಶಸ್ತ್ರ ಮೀಸಲುಪಡೆ, ಕಮಾಂಡೋ ಪಡೆಯನ್ನು ನಿಯೋಜಿಸಲಾಗಿದೆ.

ಅಲ್ಲದೆ ನಗರದಾದ್ಯಂತ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ. ಮಧ್ಯರಾತ್ರಿಯಲ್ಲಿ ತೆರಳುವ ವಾಹನಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗಿದ್ದು, ಅಂತಹ ವಾಹನಗಳ ತಪಾಸಣೆ ಕಡ್ಡಾಯವಾಗಿದೆ. ವಾಹನ ಚಾಲಿಸುವವರ ವಿವರ, ವಿಳಾಸ, ರಾತ್ರಿಯಲ್ಲಿ ತೆರಳುತ್ತಿರುವ ಕಾರಣವನ್ನು ಕೂಡ ನೀಡಬೇಕಾಗುತ್ತದೆ.

ನಾಗರಿಕರ ಸುರಕ್ಷತೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಯಾವುದೇ ಆತಂಕ ಬೇಡ ಎಂಬುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+