ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತರಿಗೆ ಹೆದರಿ ಇನ್ಸ್‌ಪೆಕ್ಟರ್ ರತ್ನಾಕರ ಶೆಟ್ಟಿ ಪರಾರಿ

By Srinath
|
Google Oneindia Kannada News

inspector-rathnakar-shetty-flees-with-walkie-talkie
ಬೆಂಗಳೂರು, ಸೆ. 8: ಅಮೃತಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ರತ್ನಾಕರ ಶೆಟ್ಟಿ ಮತ್ತು ಕಾನ್‌ಸ್ಟೆಬಲ್ ಶೋಯಲ್ ಲೋಕಾಯುಕ್ತ ದಾಳಿಗೆ ಹೆದರಿ ಬುಧವಾರ ಮಧ್ಯಾಹ್ನ ಇಲಾಖೆಯ ವಾಕಿಟಾಕಿಯೊಂದಿಗೆ ಪರಾರಿಯಾಗಿದ್ದಾರೆ.

ವಾಕಿಟಾಕಿ ಮತ್ತು ಮೊಬೈಲ್ ಮೂಲಕ ಆರೋಪಿಗಳನ್ನು ಸಂಪರ್ಕಿಸಲು ಪೊಲೀಸರು ನಿರಂತರವಾಗಿ ಪ್ರಯತ್ನಿಸಿದರೂ ಅವರು ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ನಿಮಗೇನಾದರೂ ಇವರ ಬಗ್ಗೆ ಸುಳಿವು ಲಭ್ಯವಾದರೆ ತಕ್ಷಣ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡುವುದು.

ಹೊಲಿಗೆ ಯಂತ್ರದ ಅಂಗಡಿ ಮಾಲೀಕರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇವರಿಬ್ಬರೂ ಲೋಕಾಯುಕ್ತ ದಾಳಿಯ ಸುಳಿವು ಅರಿತು ಪರಾರಿಯಾಗಿದ್ದಾರೆ.

ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಲಂಚಕ್ಕೆ ಒತ್ತಾಯಿಸಿದ್ದ ಬಗ್ಗೆ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹೊಲಿಗೆ ಯಂತ್ರದ ಅಂಗಡಿ ಮಾಲೀಕನನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿರುವ ಬಗ್ಗೆಯೂ ಸಾಕ್ಷ್ಯ ಕಲೆ ಹಾಕಿದ್ದಾರೆ.

English summary
A police inspector and a constable are on the run from the Lokayukta sleuths. On Wednesday, the Lokayukta police went to Amruthahalli police station to catch inspector Rathnakar Shetty and constable Sohail red-handed, while taking bribe. However, the duo, alerted about the waiting sleuths, escaped.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X