ಪತ್ರಕರ್ತರಿಗೆ ವಕೀಲರಿಂದ ಹಲ್ಲೆ: ಪ್ರೆಸ್ ಕ್ಲಬ್ ನಲ್ಲಿ ಪ್ರತಿಭಟನೆ

ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರ ಧಾಳಿಯನ್ನು ಖಂಡಿಸಿ ಪ್ರೆಸ್ ಗಿಲ್ಡ್ ಅಧ್ಯಕ್ಷ ಪ್ರಭಾಕರ್ ಮಾತನಾಡಿದರು. ಹಲ್ಲೆ ನಡೆಸಿದ ವಕೀಲರ ವಿರುದ್ಧ ಪ್ರತಿಭಟನೆಯಲ್ಲಿ ದಿಕ್ಕಾರ ಕೂಗಲಾಯಿತು.
ವರದಿಗಾರರ ಕೂಟ ಸೇರಿದಂತೆ ಸಮಸ್ತ ಪತ್ರಕರ್ತರು ವಕೀಲರ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ಘಟನೆಗೆ ಕಾರಣರಾದ ವಿರುದ್ಧ ಮುಖ್ಯ ನ್ಯಾಯಾಧೀಶರಿಗೆ ದೂರು ನೀಡಲು ತೀರ್ಮಾನಿಸಲಾಗಿದೆ.
ಇಂತಹ ಘಟನೆ ನಡೆಯುವುದು ಇದು ಮೊದಲಲ್ಲ. ಇದಕ್ಕೂ ಮೊದಲು ಹಲವು ಭಾರಿ ವಕೀಲರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ವರದಿಗಾರರ ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ವರದಿಗಾರರ ಕೂಟದ ಅಧ್ಯಕ್ಷ ಬಿ. ಎನ್. ಶ್ರೀಧರ್ ತಿಳಿಸಿದ್ದಾರೆ.
ದರ್ಶನ್ ಅವರನ್ನು ನಿನ್ನೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರು ಪಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಟಿವಿ ಪತ್ರಕರ್ತರು ಓಬಿ ವಾಹನದಲ್ಲಿ ನ್ಯಾಯಾಲಯದ ಆವರಣದಲ್ಲಿದ್ದರು. ಆಗ ಆ ವಾಹನ ನ್ಯಾಯಾಲಯದಲ್ಲಿ ಹಾದು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ತಾಗಿತ್ತು. ಕೆರಳಿದ ಆವ್ಯಕ್ತಿ ಜಗಳ ಆರಂಭಿಸಿದರು.
ಸುತ್ತಮುತ್ತಲಿನ ಹಲವು ವ್ಯಕ್ತಿಗಳು, ಹಲವು ವಕೀಲರುಗಳು ಸೇರಿಕೊಂಡು ಮಾಧ್ಯಮ ಪ್ರತಿನಿಧಿಗಳ ಮೇಲೆ ದಾಳಿ ನಡೆಸಿದ್ದರು. ವಕೀಲರು ಮಾಧ್ಯಮ ಪ್ರತಿನಿಧಿಗಳಿಂದ ಕ್ಯಾಮರಾಗಳನ್ನು ಕಿತ್ತುಕೊಂಡು ನೆಲಕ್ಕೆ ಅಪ್ಪಳಿಸಿದ್ದರು. ವರದಿಗಾರರು ಮತ್ತು ಕ್ಯಾಮರಾಮ್ಯಾನ್ ಗಳ ಮೇಲೆ ಹಲ್ಲೆಯನ್ನು ನಡೆಸಿದ್ದಾರೆ.
3 ವಿಡಿಯೋ ಕ್ಯಾಮರಾ ಜಖಂಗೊಂಡಿದೆ. ಆರು ಮಂದಿ ಮಾಧ್ಯಮ ಪ್ರತಿನಿಧಿಗಳಿಗೆ ಗಾಯವಾಗಿತ್ತು. ಕೆಲವು ವಕೀಲರು ಕೋರ್ಟ್ ಹೊರಗಿದ್ದ ಮಾಧ್ಯಮ ಪ್ರತಿನಿಧಿಗಳತ್ತ ಕಲ್ಲು ತೂರಾಟವನ್ನೂ ನಡೆಸಿದ್ದಾರೆ. ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications