ತಾಂಜಾನಿಯಾ ಜಲದುರಂತ, 200ಕ್ಕೂ ಅಧಿಕ ಸಾವು

ಝಂಝಿಬಾರ್ ಮತ್ತು ಪೆಂಬ ಝಂಝಿಬಾರ್ ಪರ್ಯಾಯ ದ್ವೀಪದ ಎರಡು ಪ್ರಮುಖ ದ್ವೀಪಗಳು. ಈ ಎರಡು ದ್ವೀಪಗಳು ಪ್ರವಾಸಿಗರ ಆಕರ್ಷಣೆಯ ತಾಣಗಳು. ಇಲ್ಲಿನ ಹಿಂದೂ ಮಹಾಸಾಗರದ ಅಪೂರ್ವ ಶ್ವೇತ ಬೀಚ್ಗಳಿಗಾಗಿ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ.
"ಈ ದೋಣಿಯಲ್ಲಿ 572ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬುದನ್ನು ದೋಣಿಗೆ ಸಂಬಂಧಪಟ್ಟ ದಾಖಲೆಗಳು ತೋರಿಸುತ್ತವೆ" ಎಂದು ಝಂಝಿಬಾರ್ ಪೊಲೀಸ್ ಕಮಿಶನರ್ ಮೂಸಾ ಅಲಿ ಮೂಸಾ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದರು.
"ಈ ತನಕ ಸುಮಾರು 325 ಮಂದಿಯನ್ನು ರಕ್ಷಿಸಲಾಗಿದೆ. ಸುಮಾರು 100 ಮೃತದೇಹಗಳನ್ನು ಮೇಲಕ್ಕೆತ್ತಿದ್ದೇವೆ. ಆದರೆ, ಈ ಹಂತದಲ್ಲಿ ಮೃತಪಟ್ಟವರ ನಿರ್ದಿಷ್ಟ ಸಂಖ್ಯೆಯನ್ನು ನಾನು ನೀಡಲು ಸಾಧ್ಯವಿಲ್ಲ. ಪರಿಸ್ಥಿತಿ ಗಂಭೀರವಾಗಿದೆ" ಎಂದು ಅವರು ಹೇಳಿದರು.
ಪೆಂಬ ಮತ್ತು ಝಂಝಿಬಾರ್ ದ್ವೀಪಗಳ ನಡುವೆ 40 ಕಿ.ಮೀ. ಅಂತರವಿದೆ. ಇಲ್ಲಿನ ದೋಣಿಗಳ ಪರಿಸ್ಥಿತಿ ಹದಗೆಟ್ಟಿತ್ತು ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಮತ್ತು ಸರಕನ್ನು ಸಾಗಿಸಲಾಗುತ್ತಿತ್ತು ಎಂದು ಈ ಎರಡು ದ್ವೀಪಗಳ ಮಧ್ಯೆ ನಿಯಮಿತವಾಗಿ ಸಂಚರಿಸುವ ಪ್ರಯಾಣಿಕರು ಹೇಳಿದ್ದಾರೆ.
ರಕ್ಷಿಸಲ್ಪಟ್ಟ 40 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ತಾಂಝಾನಿಯ ಸರಕಾರ ತುರ್ತು ಪರಿಹಾರ ಕೇಂದ್ರವೊಂದನ್ನು ಸ್ಥಾಪಿಸಿದೆ. ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ಅದು ವಿದೇಶಗಳ (ಮುಖ್ಯವಾಗಿ ದಕ್ಷಿಣ ಆಫ್ರಿಕ ಮತ್ತು ಕೀನ್ಯಾ) ನೆರವನ್ನು ಕೋರಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications