ಡಿಕೆಶಿ ಅಕ್ರಮ ಗಣಿಗಾರಿಕೆ, ವಂಚನೆ ಬಗ್ಗೆ ಮೌನವೇಕೆ?

ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಪೆ ಅದಿರು ಮಣ್ಣು ಎಂದು ಹೇಳಿ ಗುಣಮಟ್ಟದ ಅದಿರು ಮಣ್ಣು ಟನ್ಗೆ 250 ರುಪಾಯಿಗೆ ತಮ್ಮ ಅಧಿನದ ಸಂಸ್ಥೆಗಳಿಂದ ಖರೀದಿ ಮಾಡಿದ್ದಾರೆ.
ಪಿ.ಕೆ.ಎಲ್ ಎಂಬ ಬೇನಾಮಿ ಸಂಸ್ಥೆಯ ಮೂಲಕ ಟನ್ ಒಂದಕ್ಕೆ 1,250 ರು.ನಂತೆ ವಿದೇಶಿ ಕಂಪೆನಿಗಳಿಗೆ ರವಾನಿಸಿದ್ದಾರೆ ಎಂದು ಶ್ರೀನಿವಾಸ್ ಆರೋಪಿಸಿದರು.
ಡಿಕೆಶಿ ಅಕ್ರಮ ಕಂಪನಿಗಳು: ನಂತರ ಡಿಕೆಶಿ ಅಕ್ರಮಗಳ ಕುರಿತ ಕೆಲವು ದಾಖಲೆ ಬಿಡುಗಡೆ ಮಾಡಿದರು. ಡಿಕೆಶಿ ಹಾಗೂ ಅವರ ಸಹೋದರರ ಒಡೆತನ ಮತ್ತು ಅವರ ಪಾರ್ಟ್ನರ್ಶಿಪ್ ಇರುವ ವಿಕ್ಟರಿ ಎಕ್ಸ್ಪೋರ್ಟ್ಸ್, ಇಂಡಿಯನ್ರಾಕ್ಸ್, ವ್ಯಾಲೀಶ್, ಸುವ್ವಿ ಗ್ರಾನೈಟ್ಸ್, ಸ್ಕಂದ ಎಂಟರ್ಪ್ರೈಸಸ್, ಸಾಲ್ ಟ್ರೇಡಿಂಗ್ ಕಂಪೆನಿ, ನೆಟ್ಪ್ರಾಜೆಕ್ಟ್ ಸಲ್ಯೂಷನ್, ಎಸ್ ಪ್ರದೀಪ್ ಎಕ್ಸ್ಪೋರ್ಟ್ಸ್ ಎಂಬ ಕಂಪೆನಿಗಳಿಗೆ ಎಂ.ಎಂ. ಎಲ್ನಿಂದ ಅತೀ ಕಡಿಮೆ ದರದಲ್ಲಿ ಖರೀದಿ ಮಾಡಿ ಸರ್ಕಾರಕ್ಕೆ ರಾಜಧನವನ್ನ ಕಟ್ಟದೇ ಕೋಟ್ಯಾಂತರ ರು ವಂಚನೆ ಮಾಡಲಾಗಿದೆ.
ಎಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವಿಧಾನ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಅಕ್ರಮಗಣಿಗಾರಿಕೆಯ ಬಗ್ಗೆ ಚರ್ಚೆ ನಡೆದಿತ್ತು. ಆಗ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆಯವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಅಂದಿನ ಸರ್ಕಾರ ಕೇಳಿಕೊಂಡಿತ್ತು.
ಆದರೆ ಡಿ.ಕೆ.ಶಿವಕುಮಾರ್ ಅಕ್ರಮ ಅವ್ಯವಹಾರ ನಡೆಸಿರುವುದು ದಾಖಲೆಗಳಿದ್ದರೂ ಎಲ್ಲಿಯೂ ದೋಷಿಯನ್ನಾಗಿಸಿಲ್ಲ. ಅಲ್ಲದೆ ಲೋಕಾಯುಕ್ತ ಎರಡನೇ ವರದಿಯಲ್ಲಿ ಕಾಂಗ್ರೆಸ್ಸಿನ ಅನಿಲ್ ಲಾಡ್ ಅವರ ಹೆಸರು ಮಾತ್ರ ಸೇರಿಸಲಾಗಿದೆ.
ಜನಾರ್ದನ ರೆಡ್ಡಿ ಅವರ ಮೇಲೆ ಸಿಬಿಐ ದಾಳಿ ನಡೆಸಿದಂತೆ ಕರ್ನಾಟಕದಲ್ಲೂ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವ ಅಗತ್ಯ ಇದೆ ಎಂದು ಶ್ರೀನಿವಾಸ್ ಅಭಿಪ್ರಾಯಪಟ್ಟರು.












Click it and Unblock the Notifications