ಜಾಮೀನು: ಜನಾರ್ದನ ರೆಡ್ಡಿಗೆ ಇಂದು ನಿರ್ಣಾಯಕ ದಿನ

ಇಲ್ಲಿನ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ.ವಿ. ಶ್ರೀನಿವಾಸ್ ರೆಡ್ಡಿ ಅವರ ಜಾಮೀನು ಅರ್ಜಿಯ ಆದೇಶವನ್ನು ವಿಶೇಷ ಸಿಬಿಐ ನ್ಯಾಯಾಲಯ ಇಂದಿಗೆ (ಮಂಗಳವಾರ) ಕಾಯ್ದಿರಿಸಿದೆ. ಹಾಗೆಯೇ ಹೆಚ್ಚಿನ ವಿಚಾರಣೆಗಾಗಿ ರೆಡ್ಡಿದ್ವಯರನ್ನು ತಮ್ಮ ವಶಕ್ಕೆ ಕೊಡಬೇಕು ಎನ್ನುವ ಸಿಬಿಐ ಅರ್ಜಿಯ ತೀರ್ಪನ್ನೂ ಮಂಗಳವಾರ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.
ಸೋಮವಾರ ರಾತ್ರಿ ಸುಮಾರು 9 ಗಂಟೆ ವೇಳೆಯಲ್ಲಿ ನ್ಯಾಯಾಧೀಶರು ತಮ್ಮ ಈ ನಿರ್ಧಾರಗಳನ್ನು ತಿಳಿಸಿದರು. ಇದರಿಂದಾಗಿ ಜಾಮೀನು ದೊರೆಯಬಹುದು ಎಂದು ನಿರೀಕ್ಷಿಸಿದ್ದ ರೆಡ್ಡಿಗಳಿಗೆ ಹಾಗೂ ಇಬ್ಬರನ್ನೂ ತಮ್ಮ ವಶಕ್ಕೆ ನೀಡಬಹುದು ಎನ್ನುವ ಸಿಬಿಐಗೆ ಭಾರೀ ನಿರಾಸೆಯಾಯಿತು.
ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿವೇಕ್ ಟಂಕ ಅವರು, ರೆಡ್ಡಿ ದ್ವಯರು ಬಳ್ಳಾರಿ ಮತ್ತು ಆಂಧ್ರ ಪ್ರದೇಶದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಜಾಮೀನು ನೀಡಬಾರದು ಎಂದು ಹೇಳಿದರು. ಜನಾರ್ದನ ರೆಡ್ಡಿ ಪರ ಹಿರಿಯ ವಕೀಲರಾದ ಯು.ಯು.ಲಲಿತ್, ಬೆಂಗಳೂರಿನ ಸಿ.ವಿ. ನಾಗೇಶ್ ವಾದ ಮಂಡಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications