ಲೋಕಾಯುಕ್ತಕ್ಕೆ ಪರಮಾಧಿಕಾರ ಬೇಕಾಗಿಲ್ಲ: ಪಾಟೀಲ್

ಪರಮಾಧಿಕಾರ ನೀಡುವಂತೆ ಸರ್ಕಾರವನ್ನು ಕೇಳುವುದಿಲ್ಲ. ಆದರೆ, ಮೂರು ಮುಖ್ಯ ಅಧಿಕಾರ ನೀಡಬೇಕು. ಕರ್ನಾಟಕದ ಲೋಕಾಯುಕ್ತ ಕಾಯ್ದೆ ದೇಶದಲ್ಲೇ ಉತ್ತಮವಾದ ಕಾಯ್ದೆ ಎಂದು ಶಿವರಾಜ್ ಪಾಟೀಲ್ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಿದ ನಂತರ ಹೇಳಿದರು.
* ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿ, ನೌಕರರನ್ನು ಹುದ್ದೆಗೆ ಪುನರ್ ನೇಮಕ ಮಾಡುವಾಗ ಲೋಕಾಯುಕ್ತರ ಗಮನಕ್ಕೆ ತರಬೇಕು.
* ದಾಳಿ ನಂತರ ಅಧಿಕಾರಿಗಳು, ನೌಕರರು ಯಾರೇ ಆಗಿರಲಿ ಅವರ ವಿಚಾರಣೆಗೆ ಅನುಮತಿ ನೀಡಬೇಕು.
* ಭ್ರಷ್ಟರ ವಿರುದ್ಧ ಚಾರ್ಜ್ ಶೀಟ್ ಹಾಕಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುವ ಅಧಿಕಾರ ಕಲ್ಪಿಸಬೇಕು.
ಈ ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು. ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥ್ಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ಉಪ ಲೋಕಾಯುಕ್ತರ ಅಧೀನದಲ್ಲಿ 12 ಸಾವಿರ ಪ್ರಕರಣಗಳಿವೆ. ಲೋಕಾಯುಕ್ತರ ಅಧೀನದಲ್ಲಿ 3000 ಪ್ರಕರಣಗಳು ಬಾಕಿ ಉಳಿದಿವೆ.












Click it and Unblock the Notifications