ವೋಟಿಗಾಗಿ ನೋಟು ನೀಡಿದ್ದ ಅಮರ್ ಗೆ ತಾತ್ಕಾಲಿಕ ಜಾಮೀನು

ವೋಟಿಗಾಗಿ ನೋಟು ಪ್ರಕರಣದಲ್ಲಿ ಅಮರ್ ಸಿಂಗ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸೆ. 19ರವರೆಗೆ ಜಾಮೀನು ನೀಡಿದೆ. 2 ಲಕ್ಷ ರುಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸುವಂತೆಯೂ ಕೋರ್ಟ್ ಸೂಚಿಸಿದೆ. ಆದರೆ ಅಮರ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆ ಬಿಟ್ಟು ಕದಲುವಂತಿಲ್ಲ ಎಂದೂ ದೆಹಲಿ ತೀಸ್ ಹಜಾರಿ ಕೋರ್ಟ್ ಸ್ಪಷ್ಟಪಡಿಸಿದೆ.
ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಆರೋಗ್ಯಸ್ಥಿತಿ ಕುರಿತು ದೆಹಲಿ ಏಮ್ಸ್ ವೈದ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ವರದಿಯನ್ನು ಗಣನೆಗೆ ತೆಗೆದುಕೊಂಡ ದೆಹಲಿ ನ್ಯಾಯಾಲಯ ಜಾಮೀನು ನೀಡಲು ತನ್ನದೇನೂ ಅಭ್ಯಂತರ ಇಲ್ಲ ಎಂದಿದೆ.












Click it and Unblock the Notifications