ಎಚ್ಡಿಕೆ ಕೇಸ್ ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
ಎಚ್ ಡಿ ಕುಮಾರಸ್ವಾಮಿ ದಂಪತಿ ವಿರುದ್ಧ ವಕೀಲ ವಿನೋದ್ ಕುಮಾರ್ ದೂರು ದಾಖಲಿಸಿದ್ದರು. ಹೈಕೋರ್ಟ್ ಸೆ.8 ಗುರುವಾರದಂದು ದಂಪತಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಪಿಂಟೋ ಅವರು ಎಚ್ಡಿಕೆ ದಂಪತಿಗೆ ಬೇಲ್ ಮಂಜೂರು ಮಾಡಿದ್ದರು.
ಏನು ಕಾರಣ?: ಪಿಂಟೋ ಅವರು ಜಡ್ಜ್ ಸ್ಥಾನದಿಂದ ಕೆಳಗಿಳಿಯಲು ಪ್ರಬಲವಾದ ಕಾರಣವಿದೆ. ಎಚ್ಡಿಕೆ ದಂಪತಿ ಅವವ್ಯಹಾರದ ವಿರುದ್ಧ ಅರ್ಜಿ ಸಲ್ಲಿಸಿರುವ ಪಿರ್ಯಾದುದಾರ ವಕೀಲ ವಿನೋದ್ ಕುಮಾರ್ ನ್ಯಾಯಮೂರ್ತಿ ಪಿಂಟೋ ಅವರ ಕೈಕೆಳಗೆ ಸಹಾಯಕವಾಗಿ ಕೆಲಸ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಪಿಂಟೋ ನಿಷ್ಪಕ್ಷಪಾತ ವಿಚಾರಣೆ ನಡೆಯಲಿ ಎಂದು ಅಭಿಪ್ರಾಯಪಟ್ಟು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ, ಈ ಪ್ರಕರಣದ ವಿಚಾರಣೆಗೆ ಹೊಸ ನ್ಯಾಯಾಧೀಶರನ್ನು ವರ್ಗಾಯಿಸಬೇಕಿದೆ.
ನಂತರ ಸೆ.9ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಎಚ್ ಡಿ ಕುಮಾರಸ್ವಾಮಿ ದಂಪತಿಗಳು ಹಾಜರಾಗಿದ್ದರು. ನಂತರ ಸುದ್ದಿಗೋಷ್ಠಿಯಲ್ಲಿ 'ನಾನು ನನ್ನ ವಕೀಲರು ಏನು Instructions ಕೊಟ್ರೋ ಅದರಂತೆ ನಡೆದುಕೊಳ್ಳುವುದು ನನ್ನ ಕರ್ತವ್ಯ' ಎಂದು ಎಚ್ ಡಿಕುಮಾರಸ್ವಾಮಿ ಹೇಳಿದ್ದರು.