ಅನಂತ ಉಗ್ರಾಣ ತೆರೆಯಲು ಅನುಮತಿ ಕೋರಿದ ಸುಪ್ರೀಂ ಸಮಿತಿ

'ಬಿ' ಉಗ್ರಾಣದ ಸ್ಥಿತಿ ಮತ್ತು ಅದರಲ್ಲಿರುವ ಸಂಪತ್ತಿನ ಮೌಲ್ಯವನ್ನು ತಿಳಿದುಕೊಳ್ಳುವ ಸಲುವಾಗಿ ಈ ಕೊಠಡಿಯನ್ನು ತೆರೆಯುವುದು ಅಗತ್ಯ. ಆದ್ದರಿಂದ ಉಗ್ರಾಣವನ್ನು ತೆರೆಯಬೇಕೆಂದು ಸಮಿತಿ ನ್ಯಾಯಾಲಯಕ್ಕೆ ಹೇಳಿದೆ.
ಅಂತೆಯೇ ಅನಂತನ ಸಂಪತ್ತಿಗೆ ರಕ್ಷಣೆ ಕೊಡಲು ಕೂಡ ಕೊಠಡಿಯಲ್ಲಿರುವ ಸಂಪತ್ತಿನ ಮೌಲ್ಯ ನಿರ್ಣಯಿಸುವ ಅಗತ್ಯವಿದೆ ಎಂದು ನ್ಯಾಶನಲ್ ಮ್ಯೂಸಿಯಂನ ನಿರ್ದೇಶಕ ಸಿ. ವಿ. ಆನಂದ ಬೋಸ್ ನೇತೃತ್ವದ ಸಮಿತಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಮಧ್ಯಾಂತರ ವರದಿಯಲ್ಲಿ ಪ್ರತಿಪಾದಿಸಿದೆ. ಈ ಸಮಿತಿ ಅಂತಿಮ ವರದಿಯನ್ನು ಮುಂಬರುವ ಫೆಬ್ರವರಿಯಲ್ಲಿ ಸಲ್ಲಿಸಲಿದೆ.
ರಾಜಮನೆತನದವರು ಇಟ್ಟ ಅಷ್ಟಮಂಗಲ ಪ್ರಶ್ನೆ ಅನಂತನ ಸಂಪತ್ತಿನ ಮೌಲ್ಯಮಾಪನ ಮಾಡುವುದನ್ನು ವಿರೋಧಿಸಿದ್ದರೂ ತಾವು ಮೌಲ್ಯಮಾಪನ ಪ್ರಕ್ರಿಯೆಯನ್ನು ಮುಂದುವರಿಸಲಿದ್ದೇವೆ. ಪ್ರಸ್ತುತ ದೇಗುಲದ ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳಿಗೆ ಸಾಕಷ್ಟು ಭದ್ರತೆಯಿಲ್ಲ.
ಈಗಿನ ಪರಿಸ್ಥಿತಿಯಲ್ಲಿ ಕಳ್ಳತನವಾಗುವ ಸಾಧ್ಯತೆಯಿದೆ. ಸಂಪತ್ತಿನ ಭದ್ರತೆಯ ಹೊಣೆಯನ್ನು ಸಿಆರ್ ಪಿಎಫ್ ಗೆ ವಹಿಸಬೇಕು ಹಾಗೂ ದೇಗುಲದ ಸುತ್ತಮುತ್ತಲಿರುವ ರಾಜಕೀಯ ಪಕ್ಷಗಳ ಕಚೇರಿಗಳು, ಅಂಗಡಿಗಳು, ಹೊಟೇಲುಗಳನ್ನು ತೆರವುಗೊಳಿಸಬೇಕು. ದೇವಸ್ಥಾನದ ಸಮೀಪ ವಾಹನ ಪಾರ್ಕಿಂಗ್ ಮಾಡಲು ನಿರ್ಬಂಧ ಹೇರಬೇಕು.
ದೇಗುಲದ ಸೆಕ್ಯೂರಿಟಿ ಗಾರ್ಡ್ಗಳಿಗೆ ಪೊಲೀಸರು ಸೂಕ್ತ ತರಬೇತಿ ನೀಡಿ ಎಲ್ಲ ಸೆಕ್ಯೂರಿಟಿ ಗಾರ್ಡ್ಗಳನ್ನು ತಪಾಸಣೆಗೊಳಪಡಿಸಬೇಕು ಹಾಗೂ ದೇಗುಲದ ಸುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಸಮಿತಿ ಸಲಹೆ ಮಾಡಿದೆ.
ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳ ಪೈಕಿ ಐದನ್ನು ಈಗಾಗಲೇ ತೆರೆಯಲಾಗಿದ್ದು, ಅವುಗಳಲ್ಲಿ 1 ಲಕ್ಷ ಕೋ. ರೂ.ಗೂ ಮಿಕ್ಕಿದ ಸಂಪತ್ತು ಪತ್ತೆಯಾಗಿದೆ. ಈ ಸಂಪತ್ತಿನ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಐವರ ಸಮಿತಿ ಮತ್ತು ಮೌಲ್ಯಮಾಪನ ಪ್ರಕ್ರಿಯೆಯ ಉಸ್ತುವಾರಿಗಾಗಿ ಇಬ್ಬರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications