ಅನಂತ ಉಗ್ರಾಣ ತೆರೆಯಲು ಅನುಮತಿ ಕೋರಿದ ಸುಪ್ರೀಂ ಸಮಿತಿ

'ಬಿ' ಉಗ್ರಾಣದ ಸ್ಥಿತಿ ಮತ್ತು ಅದರಲ್ಲಿರುವ ಸಂಪತ್ತಿನ ಮೌಲ್ಯವನ್ನು ತಿಳಿದುಕೊಳ್ಳುವ ಸಲುವಾಗಿ ಈ ಕೊಠಡಿಯನ್ನು ತೆರೆಯುವುದು ಅಗತ್ಯ. ಆದ್ದರಿಂದ ಉಗ್ರಾಣವನ್ನು ತೆರೆಯಬೇಕೆಂದು ಸಮಿತಿ ನ್ಯಾಯಾಲಯಕ್ಕೆ ಹೇಳಿದೆ.
ಅಂತೆಯೇ ಅನಂತನ ಸಂಪತ್ತಿಗೆ ರಕ್ಷಣೆ ಕೊಡಲು ಕೂಡ ಕೊಠಡಿಯಲ್ಲಿರುವ ಸಂಪತ್ತಿನ ಮೌಲ್ಯ ನಿರ್ಣಯಿಸುವ ಅಗತ್ಯವಿದೆ ಎಂದು ನ್ಯಾಶನಲ್ ಮ್ಯೂಸಿಯಂನ ನಿರ್ದೇಶಕ ಸಿ. ವಿ. ಆನಂದ ಬೋಸ್ ನೇತೃತ್ವದ ಸಮಿತಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಮಧ್ಯಾಂತರ ವರದಿಯಲ್ಲಿ ಪ್ರತಿಪಾದಿಸಿದೆ. ಈ ಸಮಿತಿ ಅಂತಿಮ ವರದಿಯನ್ನು ಮುಂಬರುವ ಫೆಬ್ರವರಿಯಲ್ಲಿ ಸಲ್ಲಿಸಲಿದೆ.
ರಾಜಮನೆತನದವರು ಇಟ್ಟ ಅಷ್ಟಮಂಗಲ ಪ್ರಶ್ನೆ ಅನಂತನ ಸಂಪತ್ತಿನ ಮೌಲ್ಯಮಾಪನ ಮಾಡುವುದನ್ನು ವಿರೋಧಿಸಿದ್ದರೂ ತಾವು ಮೌಲ್ಯಮಾಪನ ಪ್ರಕ್ರಿಯೆಯನ್ನು ಮುಂದುವರಿಸಲಿದ್ದೇವೆ. ಪ್ರಸ್ತುತ ದೇಗುಲದ ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳಿಗೆ ಸಾಕಷ್ಟು ಭದ್ರತೆಯಿಲ್ಲ.
ಈಗಿನ ಪರಿಸ್ಥಿತಿಯಲ್ಲಿ ಕಳ್ಳತನವಾಗುವ ಸಾಧ್ಯತೆಯಿದೆ. ಸಂಪತ್ತಿನ ಭದ್ರತೆಯ ಹೊಣೆಯನ್ನು ಸಿಆರ್ ಪಿಎಫ್ ಗೆ ವಹಿಸಬೇಕು ಹಾಗೂ ದೇಗುಲದ ಸುತ್ತಮುತ್ತಲಿರುವ ರಾಜಕೀಯ ಪಕ್ಷಗಳ ಕಚೇರಿಗಳು, ಅಂಗಡಿಗಳು, ಹೊಟೇಲುಗಳನ್ನು ತೆರವುಗೊಳಿಸಬೇಕು. ದೇವಸ್ಥಾನದ ಸಮೀಪ ವಾಹನ ಪಾರ್ಕಿಂಗ್ ಮಾಡಲು ನಿರ್ಬಂಧ ಹೇರಬೇಕು.
ದೇಗುಲದ ಸೆಕ್ಯೂರಿಟಿ ಗಾರ್ಡ್ಗಳಿಗೆ ಪೊಲೀಸರು ಸೂಕ್ತ ತರಬೇತಿ ನೀಡಿ ಎಲ್ಲ ಸೆಕ್ಯೂರಿಟಿ ಗಾರ್ಡ್ಗಳನ್ನು ತಪಾಸಣೆಗೊಳಪಡಿಸಬೇಕು ಹಾಗೂ ದೇಗುಲದ ಸುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಸಮಿತಿ ಸಲಹೆ ಮಾಡಿದೆ.
ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳ ಪೈಕಿ ಐದನ್ನು ಈಗಾಗಲೇ ತೆರೆಯಲಾಗಿದ್ದು, ಅವುಗಳಲ್ಲಿ 1 ಲಕ್ಷ ಕೋ. ರೂ.ಗೂ ಮಿಕ್ಕಿದ ಸಂಪತ್ತು ಪತ್ತೆಯಾಗಿದೆ. ಈ ಸಂಪತ್ತಿನ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಐವರ ಸಮಿತಿ ಮತ್ತು ಮೌಲ್ಯಮಾಪನ ಪ್ರಕ್ರಿಯೆಯ ಉಸ್ತುವಾರಿಗಾಗಿ ಇಬ್ಬರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications