ನಗದು ವಶ : ರೆಡ್ಡಿಯನ್ನು ಬಳ್ಳಾರಿಗೆ ಎಳೆತಂದ ಸಿಬಿಐ

ಸಿಬಿಐನ ಇಬ್ಬರು ಪೊಲೀಸರ ಭದ್ರತೆಯಲ್ಲಿ ಪರಮದೇವನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿದ ಶ್ರೀನಿವಾಸ ರೆಡ್ಡಿಯನ್ನು ಸೆಪ್ಟೆಂಬರ್ 5ರಂದು ಸಿಬಿಐ ಅಧಿಕಾರಿಗಳು ಬಳ್ಳಾರಿಯಲ್ಲಿ ಅವರ ಮನೆಯಲ್ಲಿ ಬಂಧಿಸಿದ್ದರು. ಗುಂತಕಲ್ಲುನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡು ಕೋಟ್ಯಾಂತರ ರೂಪಾಯಿ ಹಣ ಶ್ರೀನಿವಾಸ ರೆಡ್ಡಿಗೆ ಸೇರಿದ್ದು ಎಂಬ ಖಚಿತ ಮಾಹಿತಿಯ ಮೇರೆಗೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಸೋಮಯ್ಯ ಎಂಬ ಅಧಿಕಾರಿಗಳ ನೇತೃತ್ವದ ಐವರು ಸಿಬಿಐ ಅಧಿಕಾರಿಗಳ ತಂಡ ರಾತ್ರಿ 2 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ವಿಚಾರಣೆ ನಡೆಸಿ ಸಾಕಷ್ಟು ಮಾಹಿತಿಗಳನ್ನು ಕಲೆಹಾಕಿದೆ. ವಶಪಡಿಸಿಕೊಳ್ಳಲಾಗಿದ್ದ 4 ಕೋಟಿ 85 ಲಕ್ಷ ರು. ಬಳ್ಳಾರಿಯಿಂದ ಶ್ರೀನಿವಾಸ ರೆಡ್ಡಿ ಹೆಂಡತಿ ಇದ್ದ ಕಡಪಕ್ಕೆ ಹೋಗುತ್ತಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಮತ್ತು ಜನಾರ್ದನ ರೆಡ್ಡಿಗೆ ಸೇರಿದ ಎಲ್ಲಾ ಬ್ಯಾಂಕ್ಗಳ ಖಾತೆಗಳು, ಲಾಕರ್ಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.












Click it and Unblock the Notifications