ರೆಡ್ಡಿಗಳ ಮೇಲಿನ ದಾಳಿಯಲ್ಲಿ ಸಿಬಿಐಗೆ ಮಿಶ್ರಫಲ

ಜನಾರ್ದನ ರೆಡ್ಡಿ ಚಾಲಕ ಬಾಷಾ ಇರುವ ಅನಂತಪುರದ ಮನೆಯ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು 10 ಲಕ್ಷ ರು. ವಶಪಡಿಸಿಕೊಂಡಿದ್ದಾರೆ. ಇದೇ ಸಮಯದಲ್ಲಿ ಪ್ರಸಾದ್ ಮತ್ತು ಕೃಷ್ಣಮೂರ್ತಿ ಎಂಬಿಬ್ಬರ ಮನೆ ಮೇಲೆಯೂ ದಾಳಿ ನಡೆದಿದೆ. ಅವರಿಬ್ಬರ ಮನೆಯಿಂದ 2 ಕೆಜಿ ಬೆಳ್ಳಿ ಮತ್ತು ಸೂಟ್ ಕೇಸ್ ತುಂಬ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಜನಾರ್ದನ ರೆಡ್ಡಿಯ ಅಳಿಯ ರಾಜಗೋಪಾಲ ರೆಡ್ಡಿ ಅವರ ಮನೆ ಮೇಲೆ ಕೂಡ ದಾಳಿ ನಡೆದಿದ್ದು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ತಮ್ಮ ಸುಪರ್ದಿಗೆ ಸಿಬಿಐ ಅಧಿಕಾರಿಗಳು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ.
ಚಿನ್ನಾಭರಣ ಪತ್ತೆ : ಆಕ್ಸಿಸ್ ಬ್ಯಾಂಕ್ ನಲ್ಲಿ ಶ್ರೀನಿವಾಸ ರೆಡ್ಡಿ ಮತ್ತು ಅವರ ಕುಟಂಬಕ್ಕೆ ಸೇರಿದ ಲಾಕರ್ ಗಳಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನಗದು ಮತ್ತು ಆಭರಣಗಳ ಪ್ರಮಾಣ ಎಷ್ಟು ಎಂದು ಇನ್ನೂ ಬಹಿರಂಗಪಡಿಸಲಾಗಿಲ್ಲ. ಲಾಕರ್ ತೆಗೆಯುವ ಕಾರ್ಯ ಇನ್ನೂ ಸಾಗಿದ್ದು, ಐದು ಲಾಕರ್ ಗಳನ್ನು ಇನ್ನೂ ಜಾಲಾಡಬೇಕಿದೆ.
ಖಾಲಿ ಕೈಯಲ್ಲಿ ಮರಳಿದ ಅಧಿಕಾರಿಗಳು : ಗಣಿರೆಡ್ಡಿಗಳ ಆಪ್ತರಲ್ಲಿ ಕಾಣಿಸಿಕೊಂಡಿದ್ದ ಜೆಡಿಎಸ್ ಮೂಲದ, ಬಿಜೆಪಿ ಸೇರಿದ್ದ ಆನಂದಚೌಧರಿ ಮಾಲೀಕತ್ವದ ಕುರುಗೋಡುನ ಶ್ರೀ ದೊಡ್ಡಬಸವೇಶ್ವರ ರೈಲ್ಮಿಲ್ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದಾಳಿ ನಡೆಸಿ 9 ಗಂಟೆಗೆಲ್ಲಾ ಪೂರ್ಣಗೊಳಿಸಿ ಬರಿಗೈಲಿ ಹಿಂದಿರುಗಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications