ಜನಾರ್ದನ ರೆಡ್ಡಿ ಆಪ್ತ ಸಹಾಯಕ ಅಲಿ ಎಲ್ಲಿ?

ರೆಡ್ಡಿಗಳ ಲೋಕಲ್ ವ್ಯವಹಾರದಿಂದ ಹಿಡಿದು ಫಾರಿನ್ ಬಂಡವಾಳ ಹೂಡಿಕೆ ತನಕ ಎಲ್ಲವನ್ನೂ ಅಲಿ ನೋಡಿಕೊಳ್ಳುತ್ತಿದ್ದ. ಸಿಬಿಐ ತನಿಖೆಗೆ ಅಲಿಖಾನ್ ಸಿಕ್ಕರೆ ರೆಡ್ಡಿ ಸಾಮ್ರಾಜ್ಯದ ಖಜಾನೆಯ ಕೀಲಿಕೈ ದೊರೆತಂತೆ.
ಸಿಬಿಐ ಊಹೆಗೂ ನಿಲುಕದಂತೆ, ಗೂಗಲ್ ಮ್ಯಾಪ್ ಕಣ್ಣಿಗೂ ಕಾಣದಂತೆ ಗಣಿ ರೆಡ್ಡಿಗಳ ಅಕ್ರಮ ಸಂಪಾದನೆ, ಬೇನಾಮಿ ಆಸ್ತಿಗಳನ್ನು ಕಾಪಾಡುವಲ್ಲಿ ಅಲಿ ಮಹತ್ವದ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.
ಯಾರು ಈ ಅಲಿಖಾನ್: ಆಂಧ್ರ ಪ್ರದೇಶದ ಅನಂತಪುರಂ ಜಿಲ್ಲೆಯ ಗುಂತಕಲ್ಲಿನ ಅಲಿ, ಓದಿದ್ದು ಇಂಜಿನಿಯರಿಂಗ್ ಪದವಿ.
ಜನಾರ್ದನರೆಡ್ಡಿಯ ಆಪ್ತ ಸಹಾಯಕನಾಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ. ಅಕ್ರಮ ಗಣಿಗಾರಿಕೆಯ ಪರ್ವಕಾಲ ಕೂಡಾ. 2007 ರಿಂದ 2011ರ ವರೆಗೆ ನಡೆದಿದೆ ಎಂಬುದು ಲೋಕಾಯುಕ್ತ ವರದಿಯಿಂದ ಎಲ್ಲರಿಗೂ ತಿಳಿದಿರುವ ವಿಷಯ.
ಮಾಜಿ ಸಚಿವ ಶ್ರೀರಾಮುಲು ಸಂಬಂಧಿ ಕಂಪ್ಲಿ ಶಾಸಕ ಸುರೇಶ್ಬಾಬು ಅವರ ಬಾಲ್ಯ ಸ್ನೇಹಿತನಾಗಿರುವ ಅಲಿ ರೆಡ್ಡಿ ಸಾಮಾಜ್ಯದ ಮುಖ್ಯ ಸೇನಾನಿಯಾಗಿಬಿಟ್ಟ. ಜನಾರ್ದನ ರೆಡ್ಡಿ ವಿಶ್ವಾಸ ಗಳಿಸಿಕೊಳ್ಳುವಲ್ಲಿ ಬಹು ಬೇಗ ಯಶಸ್ವಿಯಾದ.
ಆರಂಭದಲ್ಲಿ ರೆಡ್ಡಿ ಪ್ರವಾಸದ ವೇಳೆ ಅಗತ್ಯವಿರುವ ವಾಹನ, ವಸತಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡುವ ಕೆಲಸ ಈತನದಾಗಿತ್ತು. ನಂತರ ರೆಡ್ಡಿಯ ಅಂತರಂಗ ಬಹಿರಂಗ ಅರಿತು ಬಲಗೈ ಬಂಟನಾದ.
ಜನಾರ್ದನರೆಡ್ಡಿಯ ಗಣಿ ಜಗತ್ತಿನ ದೇವರಾದರೆ ಅಲಿ ಪೂಜಾರಿಯಂತೆ ಎಲ್ಲವನ್ನೂ ನಿರ್ವಹಿಸುತ್ತಿದ್ದ. ಅಲಿ ಕೈ ಸೇರಿದ್ದೆ ಯಾವ ಫೈಲೂ ರೆಡ್ಡಿಗಳನ್ನು ತಲುಪಿರಲಿಲ್ಲ ಎನ್ನಲಾಗಿದೆ.
ಇಂಜಿನಿಯರ್ ಅಲಿ ಬುದ್ಧಿವಂತಿಕೆ ಮೆಚ್ಚಿದ್ದ ರೆಡ್ಡಿ ಕೂಡಾ ಅತನನ್ನು ಬಹುವಾಗಿ ನಂಬಿದ್ದರು. ಸ್ವಾಮಿನಿಷ್ಠೆ ಮೆರೆದಿರುವ ಅಲಿ ಈಗ ಅಳಿವಿನಂಚಿನಲ್ಲಿರುವ ರಿಪಬ್ಲಿಕ್ ಆಫ್ ಬಳ್ಳಾರಿಯ ಗುಪ್ತ ನಿಧಿಗಳನ್ನು ಭದ್ರಪಡಿಸುತ್ತಿದ್ದಾನೆ ಎನ್ನುತ್ತದೆ ಮೂಲಗಳು. ಅಲಿ ಸಿಗುವ ತನಕ ರೆಡ್ಡಿಗಳು ಸೇಫ್ ಎನ್ನಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications