'ಕಳಂಕಿತ' ನ್ಯಾ.ಪಾಟೀಲ್ ಲೋಕಾಯುಕ್ತಕ್ಕೆ ರಾಜೀನಾಮೆ?

ಈ ವಿವಾದದಲ್ಲಿ ತಮ್ಮನ್ನು ಸೂಕ್ತ ದಾಖಲೆಗಳೊಂದಿಗೆ ಸಮರ್ಥಿಸಿಕೊಳ್ಳುತ್ತಾರೋ ಅಥವಾ ನೈತಿಕ ಹೊಣೆಹೊತ್ತು ರಾಜೀನಾಮೆಗೆ ಮುಂದಾಗುತ್ತಾರೋ ಎನ್ನುವುದು ಸೋಮವಾರ ತೀರ್ಮಾನವಾಗಲಿದೆ. ಏಕೆಂದರೆ ರಾಜ್ಯ ಪ್ರವಾಸದಿಂದ ರಾಜಧಾನಿಗೆ ಹಿಂದಿರುಗಿರುವ ನ್ಯಾ. ಶಿವರಾಜ್ ಪಾಟೀಲ್ ಸೋಮವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿ 1982ರಲ್ಲಿ ತಮ್ಮ ಹೆಸರಲ್ಲಿ ನಿವೇಶನ ಖರೀದಿಸಿದ್ದ ನ್ಯಾ. ಶಿವರಾಜ್ ಪಾಟೀಲ್, 1994ರಲ್ಲಿ ಯಲಹಂಕ ಅಲ್ಲಾಳಸಂದ್ರದಲ್ಲಿ ನ್ಯಾಯಾಂಗ ಇಲಾಖೆ ನೌಕರರ ಗೃಹ ನಿರ್ಮಾಣ ಸೊಸೈಟಿಯಿಂದ 9600 ಚದರ ಅಡಿಯ ಮತ್ತೂಂದು ನಿವೇಶನ ಪಡೆದುಕೊಂಡಿದ್ದರು. ಇದಲ್ಲದೆ 2006ರಲ್ಲಿ ತಮ್ಮ ಪತ್ನಿ ಹೆಸರಲ್ಲಿ ವೈಯಾಲಿಕಾವಲ್ನಲ್ಲಿ 4,012 ಚದರಡಿಯ ನಿವೇಶನ ಕೊಂಡುಕೊಂಡಿದ್ದರು.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯಾಗಿ ಶಿವರಾಜ್ ಪಾಟೀಲ್ ನಿಯಮ ಉಲ್ಲಂಘಿಸಿ ನಿವೇಶನ ಖರೀದಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ನ್ಯಾ. ಶಿವರಾಜ್ ಪಾಟೀಲ್ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಲೋಕಾಯುಕ್ತದಂಥ ಸ್ಥಾನದಲ್ಲಿದ್ದುಕೊಂಡು ಕಾನೂನುಬಾಹಿರ ಕೆಲಸ ಮಾಡಿದ ಆರೋಪಕ್ಕೆ ತುತ್ತಾಗಿರುವುದರಿಂದ ಶಿವರಾಜ್ ಪಾಟೀಲ್ಗೆ ಮುಜುಗರ ಉಂಟಾಗಿದೆ. ಅಲ್ಲದೆ ಅವರ ನೈತಿಕತೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ ಕೂಡ ಲೋಕಾಯುಕ್ತ ಸ್ಥಾನಕ್ಕೆ ನ್ಯಾ. ಶಿವರಾಜ್ ಪಾಟೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಶನಿವಾರ ಆಗ್ರಹಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications