ರೆಡ್ಡಿ ಆಪ್ತ ಶಾಸಕ ಸುರೇಶ್ ಬಾಬು ಮೇಲೆ ಸಿಬಿಐ ಕಣ್ಣು

ವಸೂಲಿ ದಂಧೆಯಿಂದ ಹಿಡಿದು, ಬಂದ ಹಣವನ್ನು ಯಾವ ರೀತಿ, ಎಲ್ಲಿಗೆ, ಹೇಗೆ ಸಾಗಿಸಬೇಕು ಎಂಬ ಲೆಕ್ಕಾಚಾರವನ್ನು ಥಟ್ಟನೆ ಹೇಳಿಬಿಡುತ್ತಿದ್ದ ಅಲಿಖಾನ್ ಗೆ ಸುರೇಶ್ ಬಾಬು ಸಾಥ್ ಇದ್ದೇ ಇರುತ್ತಿತ್ತು. ಈ ಕಿಲಾಡಿ ಜೋಡಿ, ರೆಡ್ಡಿ ದಂಧೆಯ ಸಕಲ ನಿರ್ವಹಣೆ ಹೊಣೆ ಹೊತ್ತ ಸೇನಾನಿಗಳಾಗಿದ್ದಾರೆ.
ವಿದೇಶದಲ್ಲಿ ಹೇಗೆ ಹಣ ತೊಡಗಿಸಬೇಕು ಎಂಬುದನ್ನು ಕೂಡ ಹೇಳಿಕೊಡುತ್ತಿದ್ದ ಅಲಿಖಾನ್ ಒಂದು ರೀತಿ ದೇಶಿ, ವಿದೇಶಿ ವ್ಯವಹಾರ ಖಾತೆ ಸಚಿವನಂತೆ ಇದ್ದ. ಅಲಿ ವ್ಯವಹಾರ ಜ್ಞಾನ, ಶ್ರೀರಾಮುಲು ಸಂಬಂಧಿ ಶಾಸಕ ಸುರೇಬ್ ಬಾಬು ತೋಳ್ಬಲ ರೆಡ್ಡಿ ಸಾಮ್ರಾಜ್ಯಕ್ಕೆ ಸದಾ ಶ್ರೀರಕ್ಷೆ ಒದಗಿಸುತ್ತಿತ್ತು.
ಮನಿ ಲಾಂಡರಿಂಗ್ ಕೇಸ್ ಭೀತಿ: ಬಳ್ಳಾರಿ ಅಧಿಕಾರಿಗಳು ಫೋನ್ ಇಟ್ಟುಕೊಂಡು ಥರ ಥರ ನಡುಗುತ್ತಿದ್ದಾರೆ ಇಲ್ಲ ಅಲಿಖಾನ್ ಅಥವಾ ಸುರೇಶ್ ಬಾಬು ಕರೆ ಮಾಡಿದ್ದಾರೆ ಎಂದರ್ಥ. ಗಣಿ ಉದ್ಯಮಕ್ಕೆ ಸಂಬಂಧಿಸಿದಂತೆ ರೆಡ್ಡಿಯ ಎಲ್ಲಾ ಹೊರ ಹೋಗುವ ಕರೆಗಳು ಹಾಗೂ ಒಳಬರುವ ಕರೆಗಳನ್ನು ಅಲಿ ನಿರ್ವಹಿಸುತ್ತಿದ್ದ.
ರೆಡ್ಡಿಗಳ ವಿದೇಶಿ ಕಂಪನಿಗಳಿಗೆ ಅಕ್ರಮ ಅದಿರು ಸಾಗಾಟದಿಂದ ಹಿಡಿದು ವಿದೇಶಿ ಹಣ ಬದಲಾವಣೆ ಅಕ್ರಮದ ಬಗ್ಗೆ ಕೂಡಾ ತನಿಖೆ ನಡೆಯುವ ಸಂಭವವಿದೀ. ಈ ಬಗ್ಗೆ ಜಾರಿ ನಿರ್ದೇಶನಾಲಯ ಇನ್ನೂ ಆಸಕ್ತಿ ವಹಿಸಿಲ್ಲ.
ಅಂತಾರಾಷ್ಟ್ರೀಯ ಹೊಟೇಲ್ ಉದ್ಯಮ ಸಂಸ್ಥೆಯೊಂದರಿಂದ ಬಳ್ಳಾರಿಯಲ್ಲಿ ಬೃಹತ್ ಹೊಟೇಲ್ ನಿರ್ಮಾಣಕ್ಕೂ ಸಿದ್ಧತೆ ನಡೆಸಿದ್ದ ಅಲಿ, ವಿದೇಶಿ ಕಂಪನಿಗಳೊಡನೆ ಆರ್ಥಿಕ ವ್ಯವಹಾರ ನಡೆಸಿದ್ದ. ಕಳೆದ ವರ್ಷ ಅಕ್ಟೋಬರ್ 25 ರಂದು ಆದಾಯ ತೆರಿಗೆ ಅಧಿಕಾರಿಗಳು ರೆಡ್ಡಿ ಕಾಲೋನಿಯಲ್ಲಿರುವ ಈತನ ಮನೆ ಮೇಲೆ ದಾಳಿ ನಡೆಸಿದಾಗ 800 ಕೋಟಿ ರೂ.ಗೂ ಹೆಚ್ಚು ನಗದು ಹಣ ದೊರಕಿತ್ತು ಎಂದು ಆದಾಯ ಇಲಾಖೆಯ ಮೂಲಗಳು ಹೇಳುತ್ತಿವೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications