ಪಾಪು ಟೀಕೆಗೆ ಕಂಬಾರ ನಿಟ್ಟುಸಿರು, ನಿರುತ್ತರ

ಚಂದ್ರಶೇಖರ ಕಂಬಾರರಿಗೆ ಜ್ಞಾನಪೀಠ ಪ್ರಶಸ್ತಿ ಬಂದಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರು, 'ಯೋಗ್ಯತೆ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿ ಬರುತ್ತಿದೆ, ಯೋಗ್ಯರು ಭಾಳಾ ಮಂದಿ ಅದಾರೆ ಎಂದು ಹೇಳಿದ್ದರು.
ಕನ್ನಡಕ್ಕೆ 7 ಜ್ಞಾನಪೀಠ ಬಂದಿದೆ, 8ನೇ ಬಂತು ಅಂತ ಖುಷಿ ಪಡುವುದರಲ್ಲಿ ಅರ್ಥವಿಲ್ಲ. ಕನ್ನಡ ಸಾಹಿತ್ಯಲೋಕದಲ್ಲಿ ಎಸ್ಎಲ್ ಭೈರಪ್ಪ ಅತ್ಯಂತ ಪ್ರಮುಖರು. ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದಿದ್ದರೆ ಅದಕ್ಕೊಂದು ಬೆಲೆ ಬರುತ್ತಿತ್ತು ಎಂದು ಪಾಟೀಲ್ ಪುಟ್ಟಪ್ಪ ಅಭಿಪ್ರಾಯಪಟ್ಟಿದ್ದಾರೆ.
ಸಂಭ್ರಮದ ನಡುವೆ ಕಹಿ: 12 ವರ್ಷಗಳ ನಂತರ ಕನ್ನಡದ ಜಾನಪದ ಸೊಗಡಿನ ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಿರುವುದಕ್ಕೆ ಎಲ್ಲರೂ ಸಂತಸಪಡುತ್ತಿದ್ದಾರೆ. ಆದರೆ, ದೂರದ ಗಡಿಭಾಗದಲ್ಲಿ ಕುಳಿತ ಹಿರಿಯ ಸಾಹಿತಿಯೊಬ್ಬರು ಈ ರೀತಿ ಅಶುಭ ನುಡಿದಿರುವುದು ಕಂಬಾರರ ಅಭಿಮಾನಿಗಳಿಗೆ ದುಃಖ ತಂದಿದೆ.
ಲಾಬಿ ಮೂಲಕ ಜ್ಞಾನಪೀಠ ಪ್ರಶಸ್ತಿಯನ್ನು ಕಂಬಾರರು ಪಡೆದಿದ್ದಾರೆ ಎಂಬುರಲ್ಲಿ ಅರ್ಥವಿಲ್ಲ. ಎಸ್.ಎಲ್.ಭೈರಪ್ಪ ಅವರು ಪ್ರಶಸ್ತಿ ಹೆಚ್ಚು ಅರ್ಹರು ನಿಜ. ಆದರೆ, ಕಂಬಾರರಿಗೆ ಪ್ರಶಸ್ತಿ ಸಿಕ್ಕಿರುವುದಕ್ಕೆ ಸಂತಸ ಪಡುವುದನ್ನು ಕಲಿಯೋಣ, ಕೊರಗು ಯಾವಾಗಲೂ ಇದ್ದಿದ್ದೇ ಎಂದು ಹಿರಿಯ ಸಾಹಿತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಪಾಪು ಟೀಕೆ ಇದೆ ಮೊದಲಲ್ಲ: ಯು.ಆರ್.ಅನಂತಮೂರ್ತಿ ಮತ್ತು ಗಿರೀಶ್ ಕಾರ್ನಾಡ್ ಅವರಿಗೂ ಜ್ಞಾನಪೀಠ ಪ್ರಶಸ್ತಿ ಲಭಿಸಿದಾಗಲೂ ಇಬ್ಬರೂ ಲಾಬಿ ಮಾಡಿ ಪ್ರಶಸ್ತಿ ಪಡೆದಿದ್ದಾರೆ ಎಂದು ಸಾಹಿತಿ ಪಾಪು ಬಹಿರಂಗವಾಗಿ ಟೀಕಿಸಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications