ಅಪಪ್ರಚಾರಕ್ಕೆ ನೊಂದ ಶಿವರಾಜ್ ಪಾಟೀಲ್ ರಾಜೀನಾಮೆ

'ತಮ್ಮ ವಿರುದ್ಧ ಕಳೆದ ಕೆಲವು ದಿನಗಳಿಂದ ದ್ವೇಷಪೂರಿತ ಅಪಪ್ರಚಾರ ಮಾಡಲಾಗುತ್ತಿದೆ. ಈ ರೀತಿಯ ಆರೋಪಗಳಿಂದ ಮನನೊಂದು ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಆದರೆ, ತಾವು ಮತ್ತು ತಮ್ಮ ಹೆಂಡತಿ ಕಾನೂನುಬಾಹಿರವಾಗಿ ಹೌಸಿಂಗ್ ಸೊಸೈಟಿ ನಿವೇಶ ಹೊಂದಿಲ್ಲ' ಎಂದು ತಮ್ಮ ರಾಜೀನಾಮೆ ಮತ್ತು ಕುಟುಂಬದ ವಿರುದ್ಧ ಮಾಡಿರುವ ಆರೋಪಗಳಿಗೆ ಅವರು ಸುಮಾರು 4 ಪುಟಗಳ ಸ್ಪಷ್ಟೀಕರಣ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಆವೇಷ ಮತ್ತು ದುಃಖದಿಂದ ಸ್ಪಷ್ಟೀಕರಣವನ್ನು ಓದಿ ಮುಗಿಸಿದ ನ್ಯಾ. ಶಿವರಾಜ್ ಪಾಟೀಲ್ ಅವರು ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೂ ಪ್ರತಿಕ್ರಿಯಿಸಲು ಅಲ್ಲಿ ನಿಲ್ಲದೆ ನೇರವಾಗಿ ಕಚೇರಿಯಿಂದ ಹೊರನಡೆದರು. ಅಲ್ಲಿಂದ ಮುಂದೆ ನೇರವಾಗಿ ತಮ್ಮ ಮನೆಗೆ ತೆರಳಿದರು.
ಇದರೊಂದಿಗೆ ಲೋಕಾಯುಕ್ತ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಲೋಕಾಯುಕ್ತರೊಬ್ಬರು ಅಧಿಕಾರವಧಿ ಪೂರ್ಣಗೊಳಿಸುವ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿಯೂ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕೇವಲ ಒಂದು ತಿಂಗಳಲ್ಲಿ ಆ ಸ್ಥಾನದಿಂದ ಆರೋಪದ ಮೇಲೆ ಹೊರ ನಡೆದಿದ್ದಾರೆ.
ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಆ. 2ರಂದು ಲೋಕಾಯುಕ್ತ ಹುದ್ದೆಯಿಂದ ನಿರ್ಗಮಿಸಿದ್ದರು. ಆ ಹಿನ್ನೆಲೆಯಲ್ಲಿ ಸರಕಾರ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ಶಿವರಾಜ್ ಪಾಟೀಲ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಿತ್ತು.
ನ್ಯಾ. ಶಿವರಾಜ್ ಪಾಟೀಲ್ ಆ. 5ರಂದು ನೂತನ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಹಿಂದಿನ ಲೋಕಾಯುಕ್ತರಾಗಿದ್ದ ನ್ಯಾ. ಸಂತೋಷ್ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿದ್ದ ಗಣಿ ವರದಿಯಿಂದಾಗಿ ಮುಖ್ಯಮಂತ್ರಿ ಹುದ್ದೆಯಲ್ಲಿದ್ದ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಅಂಥ ಲೋಕಾಯುಕ್ತ ಹುದ್ದೆಗೆ ನೂತನವಾಗಿ ಬಂದ ನ್ಯಾ. ಶಿವರಾಜ್ ಪಾಟೀಲ್ ಇದೀಗ ನಿವೇಶನ ಆರೋಪದ ಮೇಲೆ ರಾಜೀನಾಮೆ ನೀಡಿರುವುದು ವಿಪರ್ಯಾಸ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications