ಇಷ್ಟಕ್ಕೂ ನ್ಯಾ.ಪಾಟೀಲ್ ಏಕೆ ರಾಜೀನಾಮೆ ನೀಡಿದರು?

'ಹೌಸಿಂಗ್ ಸೊಸೈಟಿಯಿಂದ ನಿವೇಶನ ಖರೀದಿಯಲ್ಲಿ ಯಾವುದೇ ಅಕ್ರಮವೆಸಗಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ತಮ್ಮ ವಿರುದ್ಧ ದ್ವೇಷ ಪ್ರೇರಿತ ಪ್ರಚಾರ ನಡೆಯುತ್ತಿರುವುದರಿಂದ ಮನ ನೊಂದು ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ'.
ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ನ್ಯಾ. ಶಿವರಾಜ್ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಸಂಜೆ ಹೇಳಿದ್ದು ಹೀಗೆ. ಪತ್ರಿಕಾಗೋಷ್ಠಿಯ ಸಾರಾಂಶ ಇಷ್ಟು:
'ನಾನು ಲೋಕಾಯುಕ್ತ ಹುದ್ದೆ ಆಕಾಂಕ್ಷಿಯಾಗಿರಲಿಲ್ಲ. ಆ ಸ್ಥಾನ ನೀಡುವಂತೆ ಕೇಳಿಯೂ ಇರಲಿಲ್ಲ. ಆದರೆ ಅಂಥದೊಂದು ಅವಕಾಶ ಬಂದಾಗ ಅದನ್ನು ಒಪ್ಪಿಕೊಂಡೆ. ಜತೆಗೆ ಕರ್ನಾಟಕ ಜನತೆ ಸೇವೆ ಮಾಡಲು ಇದೊಂದು ಅವಕಾಶ ಎಂದು ಭಾವಿಸಿದ್ದೆ. ಆದರೆ ಕಳೆದ ಕೆಲವು ದಿನಗಳಿಂದ ನನ್ನ ವಿರುದ್ಧ ದುರುದ್ದೇಶವಾದ ಪ್ರಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನನ್ನ ಮತ್ತು ಪತ್ನಿ ಹೆಸರಿನಲ್ಲಿ ನಿವೇಶನ ಹೊಂದಿರುವ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟೀಕರಣ ನೀಡಲು ಬಯಸುತ್ತಿದ್ದೇನೆ'.
'1982ರಲ್ಲಿ ನಾನು ಕರ್ನಾಟಕ ಹೈಕೋರ್ಟ್ನಲ್ಲಿ ವಕೀಲನಾಗಿ ಸೇವೆ ಸಲ್ಲಿಸುತ್ತಿರುವಾಗ ವಸಂತನಗರದಲ್ಲಿ ಸಣ್ಣ ನಿವೇಶನವೊಂದನ್ನು ಖಾಸಗಿ ವ್ಯಕ್ತಿಯಿಂದ ಖರೀದಿಸಿ ಮನೆ ಕಟ್ಟಿದ್ದೆ. ಈ ನಿವೇಶನವನ್ನು ಸರ್ಕಾರ ಅಥವಾ ಯಾವುದೇ ಸೊಸೈಟಿಯಿಂದ ಪಡೆದುಕೊಂಡಿಲ್ಲ'.
'ಆ ಬಳಿಕ 1994ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದಾಗ ಕರ್ನಾಟಕ ನ್ಯಾಯಾಂಗ ಇಲಾಖೆ ಹೌಸಿಂಗ್ ಸೊಸೈಟಿಯಿಂದ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನವೊಂದನ್ನು ಪಡೆದುಕೊಂಡಿದ್ದೆ. ನ್ಯಾಯಾಮೂರ್ತಿಗಳಿಗೆ ಈ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗೆ ಕೆಲವರು ಅರ್ಜಿ ಸಲ್ಲಿಸಿದ್ದರು. ಆದರೆ ಎರಡೂ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications