ಬೆಂಗಳೂರು ಕಲ್ಯಾಣ ಮಂಟಪದಲ್ಲಿ ಸ್ಫೋಟ, ಬೆಂಕಿ

ಅಡುಗೆ ಅನಿಲ ಸ್ಫೋಟಗೊಂಡ ನಂತರ ಬೆಂಕಿ ಕಲ್ಯಾಣ ಮಂಟಪ ಹತ್ತಿಕೊಂಡು ಉರಿದಿದೆ. ಈ ಸ್ಫೋಟ ಮತ್ತು ಬೆಂಕಿಯಿಂದ ಕಟ್ಟಡ ಕುಸಿತ ಉಂಟಾಗಿ ನಾಲ್ವರಿಗೆಗಂಭೀರ ಸ್ವರೂಪದ ಗಾಯಗಳಾಗಿವೆ.
ಸಿಲಿಂಡರ್ ಸ್ಫೋಟದ ಪರಿಣಾಮ ಲಕ್ಷ್ಮಿ ವೆಂಕಟೇಶ್ವರ ಕನ್ವೇಷನ್ ಹಾಲ್ ನ ಒಂದು ಗೋಡೆ ಕುಸಿಯಿತು. ಗೋಡೆಯ ಅವಶೇಷಗಳಡಿಯಲ್ಲಿ ಕೆಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 18 ವರ್ಷದ ಸರಿತಾ ಎಂಬ ಹೆಸರಿನ ಯುವತಿ ಹಾಗೂ ಸಣ್ಣ ಮಗುವೊಂದು ಸಿಕ್ಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ.
ಘಟನೆ ನಡೆದ ಸಮಯದಲ್ಲಿ ಕಲ್ಯಾಣಮಂಟಪದಲ್ಲಿ ಹೆಚ್ಚು ಜನರಿರಲಿಲ್ಲ. ಬೆಂಕಿ ನಂದಿಸುವ ವೇಳೆ ಗಾಯಗೊಂಡ ಅಗ್ನಿಶಾಮಕ ದಳದ ಆನಂದಯ್ಯ, ರಂಗಸ್ವಾಮಿ, ಗೋವಿಂದ ರಾಜು, ನಾಗೇಶ್ ಎಂಬುವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ತೀವ್ರತೆಯಿಂದ ಅಕ್ಕ ಪಕ್ಕದ ಮನೆಗಳಿಗೂ ಹಾನಿ ಸಂಭವಿಸಿದೆ. ಕಲ್ಯಾಣ ಮಂಟಪದ ಪಕ್ಕದಲ್ಲಿ ಮೊಬೈಲ್ ಟವರ್ ಇದೆ. ಮೊಬೈಲ್ ಟವರ್ ಕುಸಿತದ ಭೀತಿ ಜನರಲ್ಲಿ ಆವರಿಸಿದೆ.
ಒಟ್ಟು 9 ಕ್ಕೂ ಅಧಿಕ ಅಗ್ನಿಶಾಮಕದಳದ ವಾಹನಗಳು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಕಟ್ಟಡ ಕುಸಿತದಿಂದ ಅಗ್ನಿಶಾಮಕದಳ ಸಿಬ್ಬಂದಿಗೂ ಗಾಯಗಳಾಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವರದಿಗಾಗಿ ನಿರೀಕ್ಷಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications