ಅನಿರೀಕ್ಷಿತ ಬೆಳವಣಿಗೆಯಲ್ಲಿ ಮುಂದಿನ ಲೋಕಾಯುಕ್ತ ಯಾರಾಗಲಿದ್ದಾರೆ?

ರಾಜ್ಯ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾ. ಎನ್ ಕೆ ಸೋಧಿ, ಸುಪ್ರೀಂಕೋರ್ಟಿನ ಹಾಲಿ ನ್ಯಾಯಾಧೀಶ ಆರ್ ವಿ ರವಿಚಂದ್ರನ್ ಮತ್ತು ಕೇರಳ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾ. ಎಸ್ ಆರ್ ಬನ್ನೂರ್ ಮಠ್ ಅವರುಗಳ ಹೆಸರು ಹೊಸ ಲೋಕಾಯುಕ್ತಕ್ಕೆ ಕೇಳಿಬಂದಿದೆ.
ಇವರಲ್ಲಿ ನ್ಯಾ. ಎನ್ ಕೆ ಸೋಧಿ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ಆದರೆ ಕೊಪ್ಪಳ ಉಪಚುನಾವಣೆ ನಂತರವಷ್ಟೇ ಲೋಕಾಯುಕ್ತಕ್ಕೆ ಹೊಸಬರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಪ್ರಸ್ತುತ ಷೇರು ನ್ಯಾಯಾಧಿಕರಣದ ಮುಖ್ಯಸ್ಥರಾಗಿರುವ ಸೋಧಿ ಅವರು ರಾಜ್ಯ ಸರಕಾರದ ನೇಮಕವನ್ನು ಒಪ್ಪಿಕೊಳ್ಳದಿದ್ದಲ್ಲಿ ಆರ್ ವಿ ರವಿಚಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ರವಿಚಂದ್ರನ್, ಮುಂದಿನ ತಿಂಗಳು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನಿವೃತ್ತರಾಗಲಿದ್ದಾರೆ. ರಾಜ್ಯ ಸರಕಾರ ಅಲ್ಲಿಯವರೆಗೂ ಕಾಯುವ ಸಾಧ್ಯತೆಯಿದೆ.
ಸದ್ಯಕ್ಕೆ ಲೋಕಾಯುಕ್ತ ಹೊಣೆ ಯಾರ ಹೆಗಲಿಗೆ ?
ಈ ಮಧ್ಯೆ, ಒಂದನೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ಎಸ್ ಬಿ ಮಜಗೆ ಅವರು ಉಸ್ತುವಾರಿ ಲೋಕಾಯುಕ್ತರಾಗಿ ಕೆಲಸ ನಿರ್ವಹಿಸಲಿದ್ದಾರೆ. ಕಾಯಂ ಲೋಕಾಯುಕ್ತರ ನೇಮಕದವರೆಗೂ ಇವರೇ ಉಸ್ತುವಾರಿ ಲೋಕಾಯುಕ್ತ ಹುದ್ದೆಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ನಿವೇಶನ ಪ್ರಕರಣ ಹಿನ್ನೆಲೆಯಲ್ಲಿ ಶಿವರಾಜ್ ಪಾಟೀಲ್ ಅವರು ಸೋಮವಾರ ಸಂಜೆ ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಮಂಗಳವಾರ ಮಧ್ಯಾಹ್ನ ಅಂಗೀಕರಿಸಿ, ಹೊಸ ಲೋಕಾಯುಕ್ತರ ನೇಮಕಕ್ಕೆ ಹಸಿರು ನಿಶಾನೆಯನ್ನು ತೋರಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications