ಅನಿರೀಕ್ಷಿತ ಬೆಳವಣಿಗೆಯಲ್ಲಿ ಮುಂದಿನ ಲೋಕಾಯುಕ್ತ ಯಾರಾಗಲಿದ್ದಾರೆ?

ರಾಜ್ಯ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾ. ಎನ್ ಕೆ ಸೋಧಿ, ಸುಪ್ರೀಂಕೋರ್ಟಿನ ಹಾಲಿ ನ್ಯಾಯಾಧೀಶ ಆರ್ ವಿ ರವಿಚಂದ್ರನ್ ಮತ್ತು ಕೇರಳ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾ. ಎಸ್ ಆರ್ ಬನ್ನೂರ್ ಮಠ್ ಅವರುಗಳ ಹೆಸರು ಹೊಸ ಲೋಕಾಯುಕ್ತಕ್ಕೆ ಕೇಳಿಬಂದಿದೆ.
ಇವರಲ್ಲಿ ನ್ಯಾ. ಎನ್ ಕೆ ಸೋಧಿ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ಆದರೆ ಕೊಪ್ಪಳ ಉಪಚುನಾವಣೆ ನಂತರವಷ್ಟೇ ಲೋಕಾಯುಕ್ತಕ್ಕೆ ಹೊಸಬರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಪ್ರಸ್ತುತ ಷೇರು ನ್ಯಾಯಾಧಿಕರಣದ ಮುಖ್ಯಸ್ಥರಾಗಿರುವ ಸೋಧಿ ಅವರು ರಾಜ್ಯ ಸರಕಾರದ ನೇಮಕವನ್ನು ಒಪ್ಪಿಕೊಳ್ಳದಿದ್ದಲ್ಲಿ ಆರ್ ವಿ ರವಿಚಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ರವಿಚಂದ್ರನ್, ಮುಂದಿನ ತಿಂಗಳು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನಿವೃತ್ತರಾಗಲಿದ್ದಾರೆ. ರಾಜ್ಯ ಸರಕಾರ ಅಲ್ಲಿಯವರೆಗೂ ಕಾಯುವ ಸಾಧ್ಯತೆಯಿದೆ.
ಸದ್ಯಕ್ಕೆ ಲೋಕಾಯುಕ್ತ ಹೊಣೆ ಯಾರ ಹೆಗಲಿಗೆ ?
ಈ ಮಧ್ಯೆ, ಒಂದನೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ಎಸ್ ಬಿ ಮಜಗೆ ಅವರು ಉಸ್ತುವಾರಿ ಲೋಕಾಯುಕ್ತರಾಗಿ ಕೆಲಸ ನಿರ್ವಹಿಸಲಿದ್ದಾರೆ. ಕಾಯಂ ಲೋಕಾಯುಕ್ತರ ನೇಮಕದವರೆಗೂ ಇವರೇ ಉಸ್ತುವಾರಿ ಲೋಕಾಯುಕ್ತ ಹುದ್ದೆಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ನಿವೇಶನ ಪ್ರಕರಣ ಹಿನ್ನೆಲೆಯಲ್ಲಿ ಶಿವರಾಜ್ ಪಾಟೀಲ್ ಅವರು ಸೋಮವಾರ ಸಂಜೆ ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಮಂಗಳವಾರ ಮಧ್ಯಾಹ್ನ ಅಂಗೀಕರಿಸಿ, ಹೊಸ ಲೋಕಾಯುಕ್ತರ ನೇಮಕಕ್ಕೆ ಹಸಿರು ನಿಶಾನೆಯನ್ನು ತೋರಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications