ಓಎಂಸಿ ರೆಡ್ಡಿ ವಿರುದ್ಧ ಸಿಡಿದೆದ್ದ ಮಾಜಿ ಮಾಲಿಕರು

ಕರ್ನಾಟಕದ ನೆರೆಯ ಆಂಧ್ರದ ಓಬುಳಾಪುರಂ ಗ್ರಾಮ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶ ಕೈಗಾರಿಕಾ ಮತ್ತು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡು ಓಎಂಸಿಗೆ ನೀಡಿದ್ದ 250 ಎಕರೆ ಭೂಮಿಯಲ್ಲಿ ಪ್ರವೇಶ ಮಾಡಿದ ಸಿಪಿಐ ಮತ್ತು ರೈತ ಸಂಘ 'ಭೂ ಮಾಲೀಕರಿಗೇ ಈ ಭೂಮಿ ನೀಡಿ" ಎಂದು ಪ್ರತಿಭಟನೆ ನಡೆಸಿತು.
ಉದ್ಧೇಶಿತ ಭೂಮಿಯ ಮಾಜಿ ಮಾಲೀಕರು ಸ್ಪರ್ಧೆಗೆ ಬಿದ್ದು ಭೂಮಿಗಳಲ್ಲಿ ಕಟ್ಟಿಗೆಗಳನ್ನು, ಕಲ್ಲುಗಳನ್ನು ನೆಟ್ಟರು. ಸರ್ಕಾರ ಮತ್ತು ಓಎಂಸಿ ಕಂಪನಿ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅನೇಕರು ಭೂ ಒತ್ತವರಿಗಾಗಿ ವಿಶೇಷ ಪ್ರಯತ್ನಗಳನ್ನು ನಡೆಸಿದರು.
ಈ ಸಂದರ್ಭದಲ್ಲಿ ಕಂಪನಿಯ ಪರವಾಗಿದ್ದ ಕಾವಲುಗಾರರ (ಸೆಕ್ಯುರಿಟಿ ಗಾರ್ಡ್) ತಾತ್ಕಾಲಿಕ ಶೆಡ್ಗಳನ್ನು ಧ್ವಂಸ ಮಾಡಿ, ಅಲ್ಲಲ್ಲಿದ್ದ ಓಎಂಸಿ ಆಸ್ತಿಪಾಸ್ತಿಯನ್ನು ಹಾಳು ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಿಪಿಐ ಅಧ್ಯಕ್ಷ ಜಗಧೀಶ, ರೈತ ಸಂಘದ ಕಾರ್ಯದರ್ಶಿ ಕಾಟಮಯ್ಯ ಸೇರಿ 20ಕ್ಕೂ ಹೆಚ್ಚಿನ ಸಂಖ್ಯೆಯ ಮುಖಂಡರು ಪಾಲ್ಗೊಂಡಿದ್ದರು.
ಎಲ್ಲರೂ ಒಕ್ಕೊರಲಿನಿಂದ 'ಪ್ರಾಣ ಕೊಟ್ಟೇವು, ಭೂಮಿ ನೀಡುವುದಿಲ್ಲ" ಎಂದು ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕುತ್ತಿದ್ದುದ್ದು ಕಮ್ಯುನಿಸ್ಟ್ ಕ್ರಾಂತಿಯನ್ನು ನೆನಪಿಸುತ್ತಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶಂಕ್ರಯ್ಯ ಅವರು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ, ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.
ಬಿಗಿ ಬಂದೋಬಸ್ತ್ : ಸಿಪಿಐ ಮತ್ತು ರೈತ ಸಂಘದ ಜಂಟಿ ಪ್ರತಿಭಟನೆ ಹಾಗೂ ಭೂಮಿ ಅತಿಕ್ರಮಣದ ಹಿನ್ನಲೆಯಲ್ಲಿ ಓಬುಳಾಪುರಂ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಡಿ. ಹಿರೇಹಾಳ್ ಗ್ರಾಮದಲ್ಲೂ ಕೂಡ ಪೊಲೀಸ್ ಭದ್ರತೆ ಹೆಚ್ಚಿನ ಸಂಖ್ಯೆಯಲ್ಲಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications