ಮಕ್ಕಳಿಗೆ ಕ್ರೋ ಬಗ್ಗೆ ಗೊತ್ತು, ಕಾಗೆ ಬಗ್ಗೆ ಗೊತ್ತಿಲ್ಲ!

ಹೀಗೆ ಇಂದಿನ ಕಾಲದ ಮಕ್ಕಳ ಜೀವನಕ್ರಮ, ಅವರಿಗೆ ದೊರೆಯುತ್ತಿರುವ ಶಿಕ್ಷಣದ ಬಗ್ಗೆ ವ್ಯಾಖ್ಯಾನಿಸಿದವರು ಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು. ಮಕ್ಕಳಿಗೆ ಎಲ್ಲದರ ಮಾಹಿತಿ ಇದೆಯೇ ಹೊರತು ಅನುಭವ ಸಿಗುತ್ತಿಲ್ಲ ಎಂದು ಅವರು ವಿಷಾದಿಸಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಅನುಭವವೂ ದಕ್ಕಬೇಕೆಂದರೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಸಿಗಬೇಕು ಎಂದು ಹೇಳಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊದಲ ಕುಲಪತಿ, ಇದರಿಂದ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಹಿಂಜರಿತವೇನೂ ಆಗುವುದಿಲ್ಲ, ಏಕೆಂದರೆ ಇಂಗ್ಲಿಷ್ ಶಿಕ್ಷಣವಂತೂ ಇದ್ದೇ ಇರುತ್ತದೆ ಎಂದರು.
ಇಂದು ಎರಡು ಬಗೆಯ ನಾಗರಿಕರನ್ನು ನಾವು ಸೃಷ್ಟಿಸುತ್ತಿದ್ದೇವೆ. ಸರಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳು ಮತ್ತು ದುಬಾರಿ ಬೆಲೆ ತೆತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಓದುವ ಮಕ್ಕಳು. ಇದರಿಂದ ಉಂಟಾಗುತ್ತಿರುವ ಅಸಮಾನತೆ ಹೋಗಲಾಡಿಸಲು ಒಂದೇ ಬಗೆಯ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಬೇಕು. ಹತ್ತನೇ ಇಯತ್ತೆವರೆಗೆ ಸರಕಾರವೇ ಶಿಕ್ಷಣ ಒದಗಿಸಬೇಕು. ಹಾಗೆಯೆ, ಇಂಗ್ಲಿಷ್ ಸೇರಿದಂತೆ ಇತರ ವಿಷಯಗಳನ್ನು ಕೂಡ ಮಕ್ಕಳಿಗೆ ಕನ್ನಡದಲ್ಲಿಯೇ ಹೇಳಿಕೊಡುವಂತಾಗಬೇಕು. ಕನ್ನಡದ ಬಗೆಗಿನ ಪ್ರೀತಿಯಿಂದ ಮಾತ್ರವಲ್ಲ, ಪ್ರಾಯೋಗಿಕವಾಗಿಯೂ ಇದು ಸರಿಯಾದ ಮಾರ್ಗ ಎಂದು ಕಂಬಾರರು ನುಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications