ಗೋಗಿ ಗ್ರಾಮಸ್ಥರ ಬದುಕು ಕಸಿಯುತ್ತಿದೆ ಯುರೇನಿಯಂ

ಆ ಹೆಲಿಕಾಪ್ಟರ್ ಬಂದಿದ್ದೇ ಯುರೇನಿಯಂ ನಿಕ್ಷೇಪವನ್ನು ಪತ್ತೆಹಚ್ಚಲೆಂದು, ಗಣಿಗಾರಿಕೆ ಮಾಡಲೆಂದು. ಯುರೇನಿಯಂ ಎಂದರೇನೇ ತಿಳಿಯದ ಮುಗ್ಧ ಗ್ರಾಮಸ್ಥರು ಇನ್ನು ನಿಕ್ಷೇಪದ ಬಗ್ಗೆ ಏನು ತಿಳಿದಾರು? ಆದರೆ, ಅದೇ ಯುರೇನಿಯಂ ಅವರ ಜೀವನವನ್ನು ಸರ್ವನಾಶ ಮಾಡುತ್ತಿದೆ.
ಗೋಗಿ ಗ್ರಾಮದಲ್ಲಿ 1996-97ರಿಂದ ಯುರೇನಿಯಂ ನಿಕ್ಷೇಪವನ್ನು ಪತ್ತೆ ಹಚ್ಚಿ, ಪರೀಕ್ಷಾರ್ಥವಾಗಿ ಯುರೇನಿಯಂ ಗಣಿಗಾರಿಕೆ ಮಾಡಲಾಗುತ್ತಿದೆ. ಇದಕ್ಕಾಗಿ 40 ಎಕರೆಯನ್ನು ಸ್ವಾಧೀನಪಡಿಸಿಕೊಳ್ಳಲು ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ ಮುಂದಾಗಿದೆ. 550 ಕೋಟಿ ರು. ಬಂಡವಾಳ ಹೂಡಿ, 1.50 ಲಕ್ಷ ಟನ್ನಷ್ಟು ಯುರೇನಿಯಂ ಹೊರತೆಗೆಯಲು ಉದ್ದೇಶಿಸಿದೆ. ಈಗಾಗಲೇ ರಾಜ್ಯ ಸರಕಾರ ಅನುಮತಿ ಕೊಟ್ಟಿದೆ. ಕೇಂದ್ರ ಪರಿಸರ ಇಲಾಖೆಯಿಂದ ಮಾತ್ರ ಇನ್ನೂ ಪರವಾನಿಗೆ ಸಿಕ್ಕಿಲ್ಲ.
ಪರೀಕ್ಷಾರ್ಥವಾಗಿ ಆರಂಭಿಸಲಾಗಿರುವ ಯುರೇನಿಯಂ ಗಣಿಗಾರಿಕೆಯಿಂದ ಗೋಗಿ ಗ್ರಾಮದಲ್ಲಿ ಕ್ಯಾನ್ಸರ್, ಅಸ್ತಮಾ, ಕಾಲರಾ ಮುಂತಾದ ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೆ ಜನರು ಕುಡಿಯುವ ನೀರು ಕೂಡ ಕಲುಷಿತಗೊಳ್ಳುತ್ತಿದೆ. ಯುರೇನಿಯಂ ಗಣಿಗಾರಿಕೆಯಿಂದ ಗೋಗಿ ಗ್ರಾಮ ಸಂಪೂರ್ಣವಾಗಿ ನಲುಗಿ ಹೋಗಿದೆ.
ಕೆಲ ಪ್ರಜ್ಞಾವಂತ ರೈತರು ಮುಂದಿನ ದಿನಗಳಲ್ಲಿ ಯುರೇನಿಯಂ ವಿಕಿರಣದಿಂದ ತಮ್ಮ ಗ್ರಾಮಕ್ಕೆ ಕೇಡಾಗಬಹುದು ಎಂದು ಜಮೀನುಗಳನ್ನು ಕೊಡಲು ಮುಂದಾಗುತ್ತಿಲ್ಲ. ಆದರೆ ಇನ್ನೊಂದೆಡೆ ಯುರೇನಿಯಂ ಗಣಿಗಾರಿಕೆಯಿಂದ ಯಾವುದೇ ಸ್ಥಳೀಯರ ಮೇಲೆ ಯಾವುದೇ ರೀತಿ ದುಷ್ಪರಿಣಾಮವಿಲ್ಲ ಅಂತಾರೆ ಯಾದಗಿರಿ ಜಿಲ್ಲಾಧಿಕಾರಿ ಗುರುನೀತ ತೇಜ ಮೇನನ್.
ಸ್ಥಳೀಯರ ಒತ್ತಾಯದ ಮೇರೆಗೆ ಇಬ್ಬರು ತಜ್ಞ ವೈದ್ಯರಾದ ಡಾ.ಮುದಕವಿ, ಡಾ.ಶೇಖರ ಪಾಟೀಲ್ ತಂಡವನ್ನು ತಯಾರಿಸಿ, ಸರ್ಕಾರಕ್ಕೆ ಗಣಿಗಾರಿಕೆ ನಡೆಸದಂತೆ ವರದಿ ಸಲ್ಲಿಸಿದ್ದರೂ ಸಹಿತ ಸರಕಾರ ಯುರೇನಿಯಂ ಗಣಿಗಾರಿಕೆಗೆ ಒಪ್ಪಿಗೆ ಸೂಚಿಸಿದ್ದು, ಗೋಗಿ ಗ್ರಾಮಸ್ಥರನ್ನು ಆತಂಕಕ್ಕೆ ಈಡು ಮಾಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications