ಪ್ರೊ ನಿರಂಜನ ವಾನಳ್ಳಿಗೆ ಕಾಮತ್ ಪ್ರಶಸ್ತಿ ಪ್ರದಾನ

ವೃತ್ತಿ ಕೌಶಲ್ಯಕ್ಕೆ, ವ್ಯಾಪಾರಕ್ಕೆ, ಸೃಜನಶೀಲತೆಯನ್ನು ಬಿಜಿನೆಸ್ಸಿಗೆ ಕನೆಕ್ಟ್ ಮಾಡುವುದಕ್ಕೆ, ವಿಸಿಟಿಂಗ್ ಕಾರ್ಡ್ ಮತ್ತು ಲೆಟರ್ ಹೆಡ್ ಹಾಗೂ ಬಯೋಡೇಟಾ ಸಂಸ್ಕೃತಿಯಿಂದ ಹೊರತಾದ ಉತ್ತರ ಕನ್ನಡ ಮಣ್ಣಿನ ಫಲಾಪೇಕ್ಷೆರಹಿತ ಗುಣ ಕುರಿತಂತೆ ಅವರು ಸಾದ್ಯಂತ ಮಾತನಾಡಿದರು. ವ್ಯಕ್ತಿ, ಬದುಕು, ಸಾಹಿತ್ಯದ ಧೋರಣೆಗಳನ್ನು ಉದಾಹರಣೆ ಸಮೇತ ಹೆಣೆಯುತ್ತ ಕಾಯ್ಕಿಣಿ ಸ್ವಾರಸ್ಯಪೂರ್ಣ ಭಾಷಣಕ್ಕೆ ಧುಮುಕಿದರು.
ಬರವಣಿಗೆ, ಸಾಹಿತ್ಯ ಸೃಷ್ಟಿಯ ಉದ್ದೇಶಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಕಾಯ್ಕಿಣಿಯವರ ಭಾನುವಾರ ಮಧ್ಯಾನ್ಹದ ಉಪನ್ಯಾಸದ ವೇಳೆ, ದಿನಕರ ದೇಸಾಯಿ, ಗೌರೀಶ ಕಾಯ್ಕಿಣಿ, ತೇಜಸ್ವಿ, ಬಿಜಿ ಎಲ್ ಸ್ವಾಮಿ, ಶಿವರಾಮ ಕಾರಂತ, ಪಾಂಡೇಶ್ವರ ಮತ್ತಿತರರು ಇಣುಕಿ ನಡೆದರು. ಇವರೆಲ್ಲ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಬಣ್ಣಿಸಿದ ಜಯಂತ, ಸಾಹಿತ್ಯ, ಸಂಗೀತ ಮತ್ತು ಕಲೆಯ ಉದ್ದೇಶ ಅಂತಿಮ ನೆಲೆಯಲ್ಲಿ ನಿರಸನವೇ ಆಗಿರುತ್ತದೆ ಎಂಬ ವಾದ ಮಂಡಿಸಿದರು.
ಲೇಖಕ, ಪರಿಸರಪ್ರಿಯ, ಛಾಯಾಚಿತ್ರಗ್ರಾಹಕ ಮತ್ತಿನ್ನೇನೇನೋ ಆಗಿದ್ದು ಉತ್ತರ ಕನ್ನಡ ಜಿಲ್ಲೆಯ ಆಗಿಹೋದ ಮಹಾನುಭಾವರ ಸಾಲಿಗೆ ಸೇರ್ಪಡೆಯಾದವರು ದಿವಂಗತ ಡಾ. ಕೃಷ್ಣಾನಂದ ಕಾಮತ್. ಅವರ ಹುಟ್ಟು ಹಬ್ಬ (ಸೆ. 29) ನಿಮಿತ್ತ ಭಾನುವಾರ ಇಲ್ಲಿ ಒಂದು ಭರಪೂರ ಸಾಂಸ್ಕೃತಿಕ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು.
ಕೃಷ್ಣಾನಂದ ಕಾಮತ್ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ, ದತ್ತಿ ಉಪನ್ಯಾಸ, ಸನ್ಮಾನ ಹಾಗೂ ಕಾಮತರ ಸ್ಮರಣೆ ಇತ್ತು. ಪ್ರತಿಷ್ಠಾನದ ಆಧಾರ ಸ್ತಂಭಗಳಾಗಿರುವ ಕಾಮತರ ಪತ್ನಿ, ಬೆಂಗಳೂರು ನಿವಾಸಿ ಜ್ಯೋತ್ಸ್ನಾ ಕಾಮತ್ ; ಮಗ ಅಲಬಾಮಾ ನಿವಾಸಿ ವಿಕಾಸ್ ಕಾಮತ್ ಮತ್ತು ಕೃಷ್ಣಾನಂದರ ತಮ್ಮ ಹೊನ್ನಾವರ ನಿವಾಸಿ ತುಳಸಿದಾಸ್ ಕಾಮತ್ ಕಾರ್ಯಕ್ರಮ ರೂಪಿಸಿದ್ದರು. ಕಾರ್ಯಕ್ರಮ ಲಕ್ಷ್ಮೀನಾರಾಯಣ ನಗರದ ಕೃಷ್ಣಕಲ್ಪ ಸಭಾಂಗಣದಲ್ಲಿ ವ್ಯವಸ್ಥೆಯಾಗಿತ್ತು.
ಕೃಷ್ಣಾನಂದ ಕಾಮತ್ ದತ್ತಿ ಉಪನ್ಯಾಸ (ವಿಷಯ ; ವಿಜ್ಞಾನ ತಂತ್ರಜ್ಞಾನ ಮತ್ತು ಪರಿಸರ ) ನೀಡಿದವರು ಕಾಮತರನ್ನು ಭಾಳ ಹಚ್ಚಿಕೊಂಡಿದ್ದ ಲೇಖಕಿ ಮತ್ತು ವಿಜ್ಞಾನಿ ನೇಮಿಚಂದ್ರ. HAL ಕಾರ್ಖಾನೆಯಲ್ಲಿ ಅವರು ವಿಜ್ಞಾನಿ. ಕಾರ್ಯಭಾರ ನಿಮಿತ್ತ ಅವರು ಇಸ್ರೇಲಿಗೆ ಪ್ರಯಾಣ ಬೆಳೆಸಿದುದರಿಂದ ಅವರ ಪರವಾಗಿ ಹೃದ್ಗತ ಉಪನ್ಯಾಸ ವಾಚಿಸಿದವರು ಡಾ. ಎಚ್ ಎಸ್ ಅನುಪಮ. ನಂತರ ಲೇಖನಗಳ ಸಂಗ್ರಹ (ಪರಿಸರ ಮತ್ತು ಅಭಿವೃದ್ಧಿ) ಕೃತಿ ಬಿಡುಗಡೆ ಮಾಡಿದವರು ಮನೋಹರ ಗ್ರಂಥಮಾಲಾದ ಜ್ಯೂನಿಯರ್ ಜಡಭರತ ಡಾ. ರಮಾಕಾಂತ ಜೋಷಿ.
ಅತ್ಯುತ್ತಮ ಪ್ರವಾಸ ಕಥನ ಕೃತಿ ಪ್ರಶಸ್ತಿಗೆ ಭಾಜನರಾದವರು ಪತ್ರಕರ್ತ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಪಾಠಮಾಡುವ ಪ್ರೊ. ನಿರಂಜನ ವಾನಳ್ಳಿ. ಇವರೂ ಉತ್ತರ ಕನ್ನಡ ಜಿಲ್ಲೆಯವರೇ. ನಿರಂಜನ ಅವರು 28 ತಿಂಗಳ ಕಾಲ ಒಮಾನ್ ಪ್ರವಾಸ ಮಾಡಿ ಹೊರತಂದ "ಒಮಾನ್ ಎಂಬ ಒಗಟು" ಕೃತಿಗೆ ಕಾಮತ್ ಪ್ರತಿಷ್ಠಾನ 25 ಸಾವಿರ ರೂ. ನಗದು ಬಹುಮಾನ ಸಂದಿತು. ವಾನಳ್ಳಿ ಅವರನ್ನು ಅವರ ತಂದೆ ತಾಯಿ ಸಮ್ಮುಖದಲ್ಲಿ ಶಾಲುಹೊದಿಸಿ ಸನ್ಮಾನಿಸಿದ್ದು ಕಾರ್ಯಕ್ರಮದ ಅಂದವನ್ನು ಹೆಚ್ಚಿಸಿತು. ಬಹುಮಾನಿತ ಕೃತಿ ಆಯ್ಕೆ ಮಾಡಿದವರು ಪ್ರತಿಷ್ಠಾನ ನೇಮಿಸಿದ್ದ ಪ್ರಶಸ್ತಿ ಸಮಿತಿ. ಸಮಿತಿಯ ಮುಖ್ಯಸ್ಥರು ಕಥೆಗಾರ ಶ್ರೀಧರ ಬಳಗಾರ.
ಪ್ರತಿಷ್ಠಾನದ ಧ್ಯೇಯೋದ್ದೇಶ ಕುರಿತು ಸವಿಸ್ತಾರವಾಗಿ ಮಾತನಾಡಿದವರು ಜ್ಯೋತ್ಸ್ನಾ ಕಾಮತ್. ತಮ್ಮ ಪತಿ ಪ್ರಣೀತ ಆದರ್ಶಗಳನ್ನು ಜನಮನಕ್ಕೆ ತಲುಪಿಸುವ ಪ್ರೀತಿ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ ಎಂಬ ಆಶಾಭಾವನೆ ವ್ಯಕ್ತಪಡಿಸಿದರು. ಕೃಷ್ಣಾನಂದ ಕಾಮತರಿಗೆ ಇದ್ದ ಒಲವುಗಳು ಎರಡು. ಒಂದು ಮನುಷ್ಯ ಪ್ರೀತಿ ಇನ್ನೊಂದು ಪರಿಸರ ಪ್ರೇಮ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications