ಸೆ.28ರಂದು ತಲಕಾವೇರಿಗೆ ಸಾಂಪ್ರದಾಯಿಕ ಪೂಜೆ

Teertodbhava at Talacauvery on Oct 17
ಮಡಿಕೇರಿ, ಸೆ. 26 : ಕರ್ನಾಟಕದ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17ರಂದು ರಾತ್ರಿ 11.30ಕ್ಕೆ ಮಿಥುನ ಪುಣ್ಯ ಲಗ್ನದಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ಹರಿದು ಭಕ್ತರನ್ನು ಪುನೀತಗೊಳಿಸಲಿದ್ದಾಳೆ.

ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮಗಳು ಸೆ.28ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 8.45ಕ್ಕೆ ಪಾತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 5ರಂದು ಅಜ್ಞಾ ಮುಹೂರ್ತ, ಅಕ್ಟೋಬರ್ 13ರಂದು ಮಧ್ಯಾಹ್ನ 12.10ಕ್ಕೆ ಅಕ್ಷಯ ಪಾತ್ರೆ ಕಾರ್ಯಕ್ರಮಗಳು ನಡೆಯಲಿವೆ.

ಈ ಬಾರಿ ರಾತ್ರಿ ಸಮಯದಲ್ಲಿ ತೀರ್ಥೋದ್ಭವವಾಗುವುದರಿಂದ ಹೆಚ್ಚಿನ ಭದ್ರತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಅಲ್ಲದೆ ಕಾವೇರಿ ತೀರ್ಥೋದ್ಭವದ ಸಂದರ್ಭ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿರುವುದರಿಂದ ವಿವಿಧ ಕಡೆಗಳಿಂದ ಸುಮಾರು 30 ಹೆಚ್ಚುವರಿ ಬಸ್‌ಗಳನ್ನು ಒದಗಿಸಲು ಸೂಚಿಸಲಾಗಿದೆ.

ನಾಡಿನೆಲ್ಲೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬರುವ ಪ್ರವಾಸಿಗರಿಗೆ ಶೌಚಾಲಯ, ವಿದ್ಯುತ್, ಆಂಬ್ಯುಲೆನ್ಸ್ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜಿಲ್ಲಾಡಳಿತ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+