ಕರಡಿ ಗೆಲುವು ಯಡಿಯೂರಪ್ಪ ಪಾದ ಕಮಲಕ್ಕೆ ಅರ್ಪಣೆ
ಬಿಜೆಪಿ ಕರಡಿ ಸಂಗಣ್ಣ ಅವರು ಎಲ್ಲ 15 ಸುತ್ತುಗಳ ಮತ ಎಣಿಕೆಯಲ್ಲೂ ಮುನ್ನಡೆ ಕಾಯ್ದುಕೊಂಡಿರುವುದು ಗಮನಾರ್ಹ. ಅವರು 12,000ಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಬಸವರಾಜ ಕೆ. ಹಿಟ್ನಾಳ್ ಅವರಿಗಿಂತ ಸಾಕಷ್ಟು ಮುಂದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಗೌಡ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕರಡಿ
ಸಂಗಣ್ಣ
(ಬಿಜೆಪಿ)
-
57,224
ಬಸವರಾಜ
ಹಿಟ್ನಾಳ್
(ಕಾಂಗ್ರೆಸ್)
-
44,979
ಪ್ರದೀಪ್
ಗೌಡ
(ಜೆಡಿಎಸ್)
-
19,339
ಆರಂಭದಿಂದಲೂ ಮುನ್ನಡೆ ಕಾದಿರಿಸಿಕೊಂಡ ಮಾಜಿ ಜೆಡಿಎಸ್ ಶಾಸಕ ಕರಡಿ ಸಂಗಣ್ಣ ಪ್ರಸಕ್ತ ಬಿಜೆಪಿ ಪರ ಭರ್ಜರಿ ಪ್ರದರ್ಶನ ನೀಡಿದರು. ಬಿಜೆಪಿ ಕಾರ್ಯಕರ್ತರ ವಿಜಯೋತ್ಸಾಹ ಎಲ್ಲೆಲ್ಲೂ ಕಂಡುಬಂದಿದೆ. ಜೆಡಿಎಸ್ ಪಕ್ಷಕ್ಕೆ ಫಲಿತಾಂಶ ತುಸು ಆಶ್ಚರ್ಯ ತಂದಿದೆ. ಏಕೆಂದರೆ ಜೆಡಿಎಸ್ಸನ್ನು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ನೂಕಿದೆ. ಇನ್ನು, ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಪಕ್ಷೇತರರಾಗಿ ತಮ್ಮ ಅದೃಷ್ಟವನ್ನೂ ಪರೀಕ್ಷಿಸಿಕೊಳ್ಳಲು ಕಣಕ್ಕಿಳಿದಿದ್ದ 11 ಅಭ್ಯರ್ಥಿಗಳು ಬೋರ್ಡಿಗೂ ಇಲ್ಲದಂತಾಗಿದ್ದಾರೆ.