ಕಾರ್ಪೊರೇಟರ್ ನಟರಾಜ್ ಹತ್ಯೆಗೆ ರಾಜಕೀಯ ದ್ವೇಷವೇ ಕಾರಣ

Corporator Nataraj
ಬೆಂಗಳೂರು, ಅ.1: ಬಿಬಿಎಂಪಿ ಕಾರ್ಪೊರೇಟರ್ ನಟರಾಜ್ ಅವರನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೆವು. ಇದನ್ನು ಸಹಿಸದೆ ಕೆಲವರು ಈ ಕೃತ್ಯವೆಸಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹತ್ಯೆಯ ಬಳಿಕ ಆಸ್ಪತ್ರೆಗೆ ಧಾವಿಸಿ ಬಂದ ಶಾಸಕರು ನಟರಾಜ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ನಗರದಲ್ಲಿ ಪ್ರತಿಪಕ್ಷದ ಸದಸ್ಯರ ಹತ್ಯೆ, ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಪೊಲೀಸ್ ವೈಫಲ್ಯವೂ ಕಾರಣವಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲೇ ಈ ರೀತಿಯ ಕೊಲೆಗಳು ನಡೆಯುತ್ತಿವೆ. ಸರ್ಕಾರ ಕೂಡಲೆ ಕ್ರಮ ಜರುಗಿಸಬೇಕು. ಪಾಲಿಕೆ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳಿಗೆ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+