ಭಾರತೀಯ ಸೇನೆಯಲ್ಲಿ ದಾಖಲೆ ನಿರ್ಮಿಸಿದ ಎರಡು ಮಕ್ಕಳ ತಾಯಿ

ಪ್ರಾಂತೀಯ ಸೇನೆಯ 969 ರೈಲ್ವೆ ಎಂಜಿನಿಯರಿಂಗ್ ರೆಜಿಮೆಂಟ್ನಲ್ಲಿ 35ರ ಹರೆಯದ ಶಾಂತಿ ತಿಗ್ಗಾ ಮೊದಲ ಮಹಿಳಾ ಯೋಧರಾಗಿ ಸೇವೆಗೆ ನಿಯೋಜಿತರಾಗಿದ್ದಾರೆ. ಪುರುಷ ಸಹೋದ್ಯೋಗಿಗಳಂತೆ ದೈಹಿಕ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಶಾಂತಿ ಸೇನೆಯಲ್ಲಿ ಯೋಧರ ಹುದ್ದೆಗೆ ಆಯ್ಕೆಯಾಗಿದ್ದಾರೆ.
'ನನ್ನ ಪತಿ ಸಾವನ್ನಪ್ಪಿದ ಬಳಿಕ 2005ರಲ್ಲಿ ಅನುಕಂಪದ ನೆಲೆಯಲ್ಲಿ ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆದೆ. ರೈಲ್ವೆಯ ಪ್ರಾಂತೀಯ ಸೇನೆಯ ಕುರಿತು ನಾನು ಕಳೆದ ವರ್ಷವಷ್ಟೇ ತಿಳಿದೆ. ಹೀಗಾಗಿ ಅದಕ್ಕೆ ಸೇರ್ಪಡೆಯಾಗಲು ಬಯಸಿದೆ. ಅಧಿಕಾರಿಗಳಿಗಿಂತ ಕಡಿಮೆ ದರ್ಜೆಯ ಹುದ್ದೆಗಳಿಗೆ ಮಹಿಳೆಯರು ಸೇರಿಲ್ಲ ಎಂಬ ವಿಷಯ ನನಗೆ ತಿಳಿದಿರಲಿಲ್ಲ. ಆದರೆ ಇದು ತುಂಬಾ ಕಠಿಣವಾಗಿತ್ತು' ಎನ್ನುತ್ತಾರೆ ಶಾಂತಿ.
'ಸೇನೆಯಲ್ಲಿ ಮಹಿಳೆಯರಿಗೆ ಯುದ್ಧರಹಿತ ಘಟಕಗಳಲ್ಲಿ ಅಧಿಕಾರಿಗಳಾಗಿ ಸೇರ್ಪಡೆಯಾಗುವ ಅವಕಾಶವಿತ್ತು. ಆದರೆ ಸುಮಾರು 13 ಲಕ್ಷ ಸಿಬ್ಬಂದಿಯನ್ನು ಹೊಂದಿರುವ ಪ್ರಬಲ ಸೇನೆಯಲ್ಲಿ ಶಾಂತಿ ತಿಗ್ಗಾ ಪ್ರಥಮ ಮಹಿಳಾ ಯೋಧರಾಗಿ ಆಯ್ಕೆಯಾಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ' ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ.
'ಆಕೆ ಎಲ್ಲ ದೈಹಿಕ ಪರೀಕ್ಷೆಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 1.4 ಕಿ.ಮೀ. ಓಟವನ್ನು ಪುರುಷ ಸೋದ್ಯೋಗಿಗಳಿಗಿಂತ ಐದು ಸೆಕೆಂಡ್ ಕಡಿಮೆ ಸಮಯದಲ್ಲಿ ಪೂರ್ಣಗೊಳಿಸಿದ್ದಾರೆ. 50 ಮೀಟರ್ ಓಟವನ್ನು 12 ಸೆಕೆಂಡ್ಗಳಲ್ಲಿ ಪೂರ್ಣಗೊಳಿಸಿದ್ದಾರೆ. ಇದನ್ನು ಶ್ರೇಷ್ಠ ಪ್ರದರ್ಶನ ಎಂದು ಪರಿಗಣಿಸಲಾಗಿದೆ' ಎಂದು ಅಧಿಕಾರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಜಲ್ಪಾಯಿಗುರಿ ಜಿಲ್ಲೆಯ ಚಲ್ಸ ನಿಲ್ದಾಣದಲ್ಲಿ ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ವರ್ಷ ಅವರು ಪ್ರಾಂತೀಯ ಸೇನೆಗೆ ಸೇರ್ಪಡೆಯಾಗಲು ಸ್ವಯಂ ಆಸಕ್ತಿ ತೋರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications