ಭ್ರಷ್ಟಾಚಾರ ಪ್ರಕರಣಕ್ಕೆ ತಡೆಯಾಜ್ಞೆ ನೀಡುವ ಅಧಿಕಾರ ಹೈಕೋರ್ಟ್ಗಿಲ್ಲ
ಸತ್ಯನಾರಾಯಣ ಶರ್ಮ ಮತ್ತು ರಾಜಸ್ಥಾನ ರಾಜ್ಯದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಕಲಂ 19(3)(ಸಿ)ಯಡಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಿಗೆ ತಡೆಯಾಜ್ಞೆ ನೀಡುವ ಅಧಿಕಾರ ಹೈಕೋರ್ಟ್ಗಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. 2001ರಲ್ಲಿ ದೇಶದ ಎಲ್ಲ ರಾಜ್ಯಗಳ ಹೈಕೋರ್ಟ್ ಹಾಗೂ ಅಧೀನ ನ್ಯಾಯಾಲಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವು ಗೊಳಿಸಿದೆ.
ಆದ್ದರಿಂದ ಭ್ರಷ್ಟಾಚಾರ ಪ್ರಕರಣದ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ವಹಿಸಬಾರದು. ಸೂಕ್ತ ಕಾರಣವಿದ್ದಲ್ಲಿ ಮಾತ್ರ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಬಹುದೆ ಹೊರತು ತಡೆಯಾಜ್ಞೆ ನೀಡುವಂತಿಲ್ಲ ಎಂದು ವಿಭಾಗೀಯ ಪೀಠ ಆದೇಶಿಸಿದೆ.
ಖಾಸಗಿ ದೂರುದಾರ ಬಾಷಾ ರಾಜ್ಯಪಾಲರಿಂದ ಅನುಮತಿ ಪಡೆದು ದೂರು ದಾಖಲಿಸಿದ್ದಾರೆ. ಜತೆಗೆ ದೂರಿನ ಸಂಬಂಧ ಅಧೀನ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಅಧೀನ ನ್ಯಾಯಾಲಯದ ವಿಚಾರಣೆಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ವಹಿಸುವುದು ಸೂಕ್ತವಲ್ಲ.
ಜತೆಗೆ ಬಾಷಾರ ಎರಡೂ ದೂರಿಗಳಿಗೆ ತಡೆಯಾಜ್ಞೆ ನೀಡುವ ಸಂದರ್ಭದಲ್ಲಿ ಏಕ ಸದಸ್ಯ ಪೀಠ ಸುಪ್ರೀಂಕೋರ್ಟ್ ಆದೇಶವನ್ನು ಪರಿಗಣಿಸಿಲ್ಲ. ಅಲ್ಲದೆ, ತಡೆಯಾಜ್ಞೆ ಆದೇಶಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಏಕ ಸದಸ್ಯ ಪೀಠದ ವಿರುದ್ಧ ವಿಭಾಗೀಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ವಕೀಲರು ವಿಚಾರಣೆಯನ್ನು ವಿಳಂಬ ಮತ್ತು ನ್ಯಾಯಾಲಯದ ಸಮಯವನ್ನು ಹರಣ ಮಾಡುತ್ತಿದ್ದಾರೆ ಎಂದು ಪ್ರಕರಣದ ವಿಚಾರಣೆ ತಡೆಯಾಜ್ಞೆ ನೀಡುವುದು ಸೂಕ್ತವಲ್ಲ. ಸಾಮಾನ್ಯ ವ್ಯಕ್ತಿ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸುತ್ತಾರೆ. ಪೊಲೀಸರು ಆ ಪ್ರಕರಣಗಳನ್ನು ನ್ಯಾಯಾಲಯದ ಅಂಗಳಕ್ಕೆ ತರುತ್ತಾರೆ.
ಹೀಗಿದ್ದಾಗ ಭ್ರಷ್ಟಾಚಾರ ಪ್ರಕರಣಗಳಿಗೆ ತಡೆಯಾಜ್ಞೆ ನೀಡಿದಲ್ಲಿ, ಆರೋಪಿಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಆದುದರಿಂದ ನ್ಯಾಯಾಂಗ ವ್ಯವಸ್ಥೆ ಹಾಗೂ ನ್ಯಾಯಾಮೂರ್ತಿಗಳು ಕಾನೂನು ವ್ಯಾಪ್ತಿಯಲ್ಲಿ ನಿರ್ವಹಿಸಬೇಕಾಗುತ್ತದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.