ಆಲ್ ಕರ್ನಾಟಕ ಟಿಪ್ಪರ್ ಕಳ್ಳರ ಬಂಧನ

ರಾಜ್ಯಾದ್ಯಂತ ಟಿಪ್ಪರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖದೀಮರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಟಿಪ್ಪರ್ ಕಳವು ಮಾಡುತ್ತಿದ್ದವರು ಎಣ್ಣೆಹೊಳೆಯ ಇಕ್ಬಾಲ್ (40) ಮತ್ತು ಗಂಜಿಮಠದ ಇಡ್ಕಾ ಇಬ್ರಾಹಿಂ (29). ಇವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಕಳೆದ 2 ವರ್ಷಗಳಿಂದ ಇವರು ರಾಜ್ಯದ ಹಲವೆಡೆ ಟಿಪ್ಪರ್ ಗಳನ್ನು ಕಳವು ಮಾಡಿ ನಕಲಿ ಆರ್ .ಸಿ.ಯೊಂದಿಗೆ ಮಾರಾಟ ಮಾಡುತ್ತಿದ್ದು, ಕೆಲವು ಸಂದರ್ಭದಲ್ಲಿ ಇನ್ಶೂರೆನ್ಸ್ ಹಣ ವಾಪಸ್ ಪಡೆಯಲು ಟಿಪ್ಪರ್ ಕಳವಾದ ಬಗ್ಗೆ ಸುಳ್ಳು ದೂರನ್ನೂ ನೀಡುತ್ತಿದ್ದರು ಎನ್ನಲಾಗಿದೆ.
ತುಮಕೂರು, ಬಳ್ಳಾರಿ, ಮೈಸೂರು ಮುಂತಾದ ಕಡೆಯಲ್ಲಿ ಇವರು ನಕಲಿ ಆರ್ ಸಿ ಸೃಷ್ಟಿ ಮಾಡುತ್ತಿದ್ದರು. ಅದಕ್ಕೆ ಪೂರಕವಾಗಿ ವಾಹನದ ಇಂಜಿನ್ ಹಾಗೂ ಚಾಸಿಸ್ ನಂಬರನ್ನೂ ಹೊಸದಾಗಿ ಪಂಚ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಲ್ಲಿನ ಸಾರಿಗೆ ಇಲಾಖೆ ಅಧಿಕಾರಿಗಳೂ ಈ ಜಾಲದಲ್ಲಿ ಶಾಮೀಲಾಗಿರುವ ಶಂಕೆ ಇದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಡೂರಿನ ಹಬೀಬ್, ಕಾರ್ಕಳದ ಸತೀಶ್, ಮೂಡಬಿದಿರೆಯ ಭಾಸ್ಕರ ಮತ್ತು ಹರೀಶ್ ತಲೆಮರೆಸಿಕೊಂಡಿದ್ದಾರೆ. ಇನ್ನೂ ಹಲವು ಆರೋಪಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾಗಿದ್ದು, ಇನ್ನೂ ಕನಿಷ್ಠ 20 ಟಿಪ್ಪರ್ ಗಳು ಇದೇ ರೀತಿಯಲ್ಲಿ ಕಳವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications