ಪದ್ಮಶ್ರೀ ಪುರಸ್ಕೃತ ಮತ್ತೂರು ಕೃಷ್ಣಮೂರ್ತಿ ವಿಧಿವಶ

ಡಾ. ಮತ್ತೂರು ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದ ತೀರಾ ಬಡ ಕುಟುಂಬದಲ್ಲಿ 8-8-1928 ಜನಿಸಿದ್ದರು. ಇವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ದೊರಕಿತ್ತು. ಇವರ ನಿಧನಕ್ಕೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಇವರು ಭಾರತೀಯ ವಿದ್ಯಾಭವನಕ್ಕೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ. ಭಾರತ ವಿದ್ಯಾಭವನದ ಅಡಿಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶಾಲೆಗಳನ್ನು ಆರಂಭಿಸುವ ಮೂಲಕ ಮಕ್ಕಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂಬುದು ಅವರ ನಿಲುವಾಗಿತ್ತು.












Click it and Unblock the Notifications