ದಸರಾ ಬಲರಾಮ ಪಡೆಯ ಜಂಬುಸವಾರಿಗೆ ತೆರೆ

ಬಳಿಕ ಕುಮ್ನಿ ಆನೆಗಳಾದ ಸರಳ ಹಾಗೂ ಮೇರಿ ಮತ್ತು ಅಶ್ವಪಡೆಯೊಂದಿಗೆ ಬಲರಾಮನನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಉಸ್ತುವಾರಿ ಸಚಿವ ರಾಮದಾಸ್, ಮೇಯರ್ ಪುಷ್ಪಲತಾ ಚಿಕ್ಕಣ್ಣರವರು ನಿಂತಿದ್ದ ಅರಮನೆ ಮುಂಭಾಗದ ವಿಶೇಷ ವೇದಿಕೆಗೆ ಕರೆ ತಂದು ನಿಲ್ಲಿಸುತ್ತಿದ್ದಂತೆಯೇ ಗಜಪಡೆಗಳು ತಮ್ಮ ಸೊಂಡಿಲನೆತ್ತಿ ಗಣ್ಯರಿಗೆ ಗೌರವಸಲ್ಲಿಸಿದವು.
ಇದೇ ಸಂದರ್ಭ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಗಣ್ಯರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಕುಶಾಲತೋಪು ಸಿಡಿಸಲಾಯಿತು. ಬಳಿಕ ಅಂಬಾರಿಯನ್ನು ಹೊತ್ತು ರಾಜಗಾಂಭೀರ್ಯದಲ್ಲಿ ತೆರಳಿದ ಬಲರಾಮನಿಗೆ ಮಾರ್ಗದುದ್ದಕ್ಕೂ ಜನ ಭಕ್ತಿಯಿಂದ ನಮಿಸಿ ಗೌರವಿಸಿದರು.
ಮುಂದಿನ ಪುಟದಲ್ಲಿ ಓದಿ: ಜಂಬೂ ಸವಾರಿಯಲ್ಲಿ ಮೇಯರ್ ಪುಷ್ಪಲತಾ ಕುದುರೆ ಸವಾರಿ











Click it and Unblock the Notifications