ಕ್ಯಾನ್ಸರ್ ಪೀಡಿತ ಕಟ್ಟಾಗೆ ಬೇಲಾ ಇಲ್ಲಾ ಜೈಲಾ?

ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಗ್ಯಾಂಗ್ ಜಾಮೀನು ಅರ್ಜಿ ತೀರ್ಪನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಶುಕ್ರವಾರ ಪ್ರಕಟಿಸಲಿದೆ.
ಕಟ್ಟಾ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ಪೂರ್ಣಗೊಂಡಿದೆ. ನ್ಯಾ.ಎನ್.ಕೆ. ಸುಧೀಂದ್ರ ರಾವ್ ತೀರ್ಪು ಪ್ರಕಟಿಸಲಿದ್ದಾರೆ.
ಕಟ್ಟಾ ಆರೋಗ್ಯ ಸ್ಥಿತಿ ಅಗಿ ಬಗ್ಗೆ ನ್ಯಾಯಮೂರ್ತಿಗಳು ತೀವ್ರವಾಗಿ ಪರಿಶೀಲಿಸಲಿದ್ದಾರೆ. ಈ ಬಗ್ಗೆ ಸವಿವರವಾದ ವರದಿಯನ್ನು ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಆಸ್ಪತ್ರೆಯ ನಿರ್ದೇಶಕರಿಂದ ಪಡೆಯಲಾಗುತ್ತದೆ.
ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಮತ್ತು ಲಂಡನ್ನ ರಾಯಲ್ ಫ್ರೀ ಆಸ್ಪತ್ರೆಗೆ ದಾಖಲಾಗಬೇಕಾಗಿದ್ದು,ಕಟ್ಟಾ ಅವರಿಗೆ ಜಾಮೀನು ನೀಡುವಂತೆ ಕಟ್ಟಾ ಪರ ವಕೀಲರು ಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.












Click it and Unblock the Notifications