ಭೈರಪ್ಪ ವಿರೋಧಿ ಹೇಳಿಕೆಗೆ ಸಾಹಿತಿಗಳ ಖಂಡನೆ

ಕರ್ನಾಟಕದಲ್ಲಿ ಯಾರಿಗೆ ಆಗಲಿ ಜ್ಞಾನಪೀಠ ಪ್ರಶಸ್ತಿ ಬಂದರೆ ಅದು ಕನ್ನಡಕ್ಕೆ ಸಂದ ಪ್ರಶಸ್ತಿ. ಈ ಬಾರಿ ಅದು ಕಂಬಾರರ ಮೂಲಕ ಕನ್ನಡಕ್ಕೆ ಬಂದಿದೆ. ಈ ಬಗ್ಗೆ ಹೆಮ್ಮೆ ಪಡಬೇಕು. ಅದನ್ನು ಬಿಟ್ಟು ಇನ್ಯಾರಿಗೋ ಜ್ಞಾನಪೀಠ ಪ್ರಶಸ್ತಿ ಸಿಗಬಾರದು, ಮರಣೋತ್ತರ ಪ್ರಶಸ್ತಿ ಸಿಗಲಿ ಎಂದು ಹೇಳುವುದು ಅಕ್ಷಮ್ಯ, ಯಾರೇ ಆಗಲಿ ಇಂತಹ ಮಾತುಗಳನ್ನು ಆಡಬಾರದು ಎಂದು ಡಾ. ಜಿಎಸ್ ಶಿವರುದ್ರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.
ಪಾಪು ಹೇಳಿಕೆ: ನಿಡುಮಾಮಿಡಿ ಸ್ವಾಮೀಜಿಗಳು ಆಲೋಚಿಸಿ ಮಾತನಾಡುವುದರೆ ಒಳ್ಳೆಯದು. ಮರಣೋತ್ತರ ಪ್ರಶಸ್ತಿ ಸಿಗಲಿ ಎಂದು ಹಾರೈಸುವುದು ಕೆಟ್ಟ ಸಂದೇಶವನ್ನು ಸಾರಿದ್ದಂತಾಗುತ್ತದೆ ಎಂದು ಡಾ. ಪಾಟೀಲ್ ಪುಟ್ಟಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಲ್ಲೂರು ಪ್ರಸಾದ್: ಭೈರಪ್ಪ ಅವರಿಗೆ ಜ್ಞಾನಪೀಠ ಸಿಗುವ ಬಗ್ಗೆ ಶ್ರೀಗಳಿಗೆ ಮಾತನಾಡುವ ಹಕ್ಕಿಲ್ಲ. ಪ್ರಶಸ್ತಿ ವಿಷಯದಲ್ಲಿ ಸಾಹಿತಿಗಳನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.
ಜ್ಞಾನ ಪೀಠ ಪ್ರಶಸ್ತಿ ಸಮಿತಿಯ ಮಾಜಿ ಸಂಚಾಲಕರಾದ ಡಾ. ಗಿರಡ್ಡಿ ಗೋವಿಂದ ರಾಜ ಅವರ ಅಭಿಪ್ರಾಯದಂತೆ ಮರಣೋತ್ತರ ಪ್ರಶಸ್ತಿ ನೀಡುವ ಸಂಪ್ರದಾಯವಿಲ್ಲ. ಎಸ್ ಎಲ್ ಭೈರಪ್ಪ ಅವರಿಗೆ ಜ್ಞಾನಪೀಠದಷ್ಟೇ ಮಹತ್ವವಿರುವ ಸರಸ್ವತಿ ಸಮ್ಮಾನ್ ಪ್ರಶಸ್ತಿ ಸಿಕ್ಕಿದೆ. ಆದರೆ, ಮಾಧ್ಯಮಗಳು ಈ ಬಗ್ಗೆ ಸರಿಯಾದ ಪ್ರಚಾರ ನೀಡಲಿಲ್ಲ ಅಷ್ಟೆ ಎಂದು ಹೇಳಿದ್ದಾರೆ.
ಭಾನು ಮುಷ್ತಾಕ್: ಭೈರಪ್ಪ ಅವರ ವಿಚಾರ ಏನೇ ಇರಲಿ. ಅವರ ಬಗ್ಗೆ ಶ್ರೀಗಳು ಮಾತನಾಡಿರುವುದು ಬೇಸರ ತರಿಸಿದೆ ಎಂದಿದ್ದಾರೆ.
ಒಟ್ಟಾರೆ, ಪ್ರಶಸ್ತಿ, ಫಲಕದಿಂದಲೇ ಸಾಹಿತಿಗಳನ್ನು ತೂಗಿ ನೋಡುವ ಕೆಟ್ಟ ಚಾಳಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಲೋಕವನ್ನು ಅಪ್ಪಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications