ಮಾನೆ ಸಾವಿನ ಕೇಸ್ ಸಿಬಿಐಗೆ ವಹಿಸಲು ಆಗ್ರಹ

ಈ ಪ್ರಕರಣದಲ್ಲಿ ಎಲ್ ಟಿಟಿಐ, ಎಎನ್ ಎಫ್ ಹಾಗೂ ಜನಪ್ರತಿನಿಧಿಗಳ ಹೆಸರು ಕೇಳಿ ಬಂದಿರುವುದರಿಂದ ಈ ಘಟನೆಯ ಬಗ್ಗೆ ಸಿಬಿಐ ಉನ್ನತ ತಂಡದಿಂದ ತನಿಖೆ ನಡೆಸಬೇಕು ಎಂದು ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಆಗ್ರಹಿಸಿದೆ.
ಘಟನಾ ಸ್ಥಳ ಮತ್ತು ಪರಿಸರದ ಜನತೆಯ ಹೇಳಿಕೆಯಂತೆ ಇಷ್ಟು ವರ್ಷದಲ್ಲಿ ಈ ಭಾಗದಲ್ಲಿ ಯಾವುದೇ ನಕ್ಸಲ್ ಚಟುವಟಿಕೆಗಳಾಗಲಿ ಕುರುಹುಗಳಾಗಲಿ ಪತ್ತೆಯಾಗಿರುವುದಿಲ್ಲ. ಹಾಗಿರುವಾಗ ಇಲ್ಲಿ ನಕ್ಸಲೀಯರು ಇಲ್ಲಿ ಬಂದಿರುವ ಸಾಧ್ಯತೆ ವಿರಳವಾಗಿದೆ.
ಅಲ್ಲದೆ ಪೇದೆ ಎಂ.ಎಸ್. ಮಾನೆಯವರ ಬೆನ್ನಿಗೆ ಗುಂಡು ತಾಗಿರುವುದು. ಗುಂಡು ಒಳಹೊಕ್ಕ ಜಾಗದಲ್ಲಿ 6.5 ಸೆಂ.ಮೀ ಗಾಯವಾಗಿರುವುದು, ಮೂರು ಬೆರಳು ತೂರಿಸುವಷ್ಟು ಆಳವಾದ ಗಾಯವಾಗಿರುವುದು ಇದು ಶಿಕಾರಿಗಳ ಗುಂಡಿಗೆ ಬಲಿಯಾಗಿದ್ದಲ್ಲ ಎಂದು ಸ್ಪಷ್ಟಪಡಿಸುತ್ತದೆ.
ಗುಂಡು ದೇಹದೊಳಗೆ ಹೊರಹೋಗದೇ ಇರುವುದು ಮತ್ತು ನಾಪತ್ತೆಯಾಗಿರುವುದು ಮೊದಲಾದ ಘಟನೆಗಳನ್ನು ನೋಡುವಾಗ ಈ ಘಟನೆಯ ಬಗ್ಗೆ ಸಾಕಷ್ಟು ಅನುಮಾನಗಳು ಕಂಡು ಬರುತ್ತಿದೆ.
ಈ ಬಗ್ಗೆ ಪುಷ್ಟೀಕರಣವಾಗುವಂತೆ ಮಾಧ್ಯಮಗಳಲ್ಲೂ ಊಹಾಪೋಹ ಸುದ್ದಿಗಳು ಹರಡುತ್ತಿವೆ. ಆ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಉನ್ನತ ಮಟ್ಟದ ಸಿಬಿಐ ಅಧಿಕಾರಿಗಳ ತಂಡದಿಂದ ತನಿಖೆ ನಡೆದು ಸತ್ಯಾಂಶ ಹೊರಬರಬೇಕಾದ ಅಗತ್ಯತೆ ಇದೆ ಎಂದು ಎಸ್ಡಿಪಿಐ ತಾಲೂಕು ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಮತ್ತು ಕಾರ್ಯದರ್ಶಿ ಅನೀಸ್ ಗೇರುಕಟ್ಟೆ ಆಗ್ರಹಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications