ಪ್ರಶಾಂತ್ ಭೂಷಣ್ ಮೇಲೆ ಯುವಕರ ಹಲ್ಲೆ

ಜನ ಲೋಕಪಾಲ ಮಸೂದೆಗಾಗಿ ಅಣ್ಣಾ ಹಜಾರೆ ಜೊತೆ ಹೋರಾಡುತ್ತಿರುವ ಪ್ರಶಾಂತ್ ಭೂಷಣ್ ಅವರ ಚೇಂಬರಿಗೆ ನುಗ್ಗಿದ ಯುವಕರು ಪ್ರಶಾಂತ್ ಅವರನ್ನು ಮನಸೋಇಚ್ಛೆ ಥಳಿಸಿದ್ದಾರೆ. ಅವರ ಕಾಲರನ್ನು ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದು ದೇಹದ ಮೇಲೆಲ್ಲ ಹಲ್ಲೆ ಮಾಡಿದ್ದಾರೆ. ನಂತರ ಕಾಲಿನಿಂದಲೂ ಒದ್ದಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಬೇಕು ಎಂಬ ಹೇಳಿಕೆಯನ್ನು ವಕೀಲರಾಗಿರುವ ಪ್ರಶಾಂತ್ ಭೂಷಣ್ ಅವರು ನೀಡಿದ್ದರು ಎನ್ನಲಾಗಿದೆ. ಇಬ್ಬರಲ್ಲಿ ಒಬ್ಬರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಥಳಿಸಿದವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಪ್ರಶಾಂತ್ ಹೇಳಿದ್ದಾರೆ. [ವಿಡಿಯೋ]












Click it and Unblock the Notifications