ಡಾ. ಅನಂತಮೂರ್ತಿ ನೀಡಿರುವ ಸಕಾಲಿಕ ಸಲಹೆ ಏನು?

universities-attract-students-cultural-activities-anant
ಮೈಸೂರು, ಅ.13: ನಾಡಿನ ಸಾಕ್ಷಿಪ್ರಜ್ಞೆ ಡಾ. ಯುಆರ್ ಅನಂತಮೂರ್ತಿ ಅವರು ಅತ್ಯಂತ ಸಕಾಲಿಕ ಸತ್ಯವನ್ನು ಹೇಳಿದ್ದು, ನಿದ್ರಾವಸ್ಥೆಯಲ್ಲಿರುವ ವಿಶ್ವವಿದ್ಯಾ ನಿಲಯಗಳನ್ನು ಜಾಗೃತಗೊಳಿಸುವ ಮಾತನ್ನಾಡಿದ್ದಾರೆ.

'ನಮ್ಮ ವಿಶ್ವವಿದ್ಯಾನಿಲಯಗಳು ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಕಲೆ ಎಂಬುವುದು ಅಡಗಿರುತ್ತದೆ. ಇದನ್ನು ವಿಶ್ವವಿದ್ಯಾನಿಲಯಗಳು ಗುರುತಿಸಿ ಪ್ರೋತ್ಸಾಹಿಸಬೇಕಿದೆ' ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಜ್ಞಾನವಿರುತ್ತದೆ ಅದನ್ನು ಗುರುತಿಸಿಕೊಳ್ಳಲು ಸೂಕ್ತ ಅವಕಾಶ ನೀಡಿ, ಹಿಂದುಳಿದ ವಿದ್ಯಾರ್ಥಿಗಳು ಮುಂದುವರಿಯಲು ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ನೀಡಬೇಕಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಶಿಕ್ಷಕರೂ ಪಠ್ಯಕ್ಕೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ಚರ್ಚಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದರ ಬದಲು ಮಕ್ಕಳಲ್ಲಿರುವ ಸಾಹಿತ್ಯ ರಸಕರಣವನ್ನು ಬೆಳೆಸಿ ಕಲೆ ಮತ್ತು ಸಂಸ್ಕೃತಿಯನ್ನು ಪಠ್ಯ ವಿಷಯವಾಗಿ ಕಲಿಸಬೇಕು ಎಂದು ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+