ನ್ಯಾ. ಗುರುರಾಜನ್ ಕೊನೆಗೂ ರಾಜೀನಾಮೆ ಸಲ್ಲಿಸಿದ್ದೇಕೆ?

ಗುರುರಾಜನ್ ತಮ್ಮ ರಾಜೀನಾಮೆ ಪತ್ರದಲ್ಲಿ ಅನಾರೋಗ್ಯದ ಕಾರಣವನ್ನು ಉಲ್ಲೇಖಿಸಿದ್ದಾರೆ. ಆದರೆ ವಾಸ್ತವ ಅದಲ್ಲ ಎಂಬುದು ಗಮನಾರ್ಹ. ಲೋಕಾಯುಕ್ತರಾಗಿದ್ದ ನ್ಯಾ.ಶಿವರಾಜ್ ವಿ ಪಾಟೀಲ್ ಅವರು ಗೃಹ ನಿರ್ಮಾಣ ಸಂಘದಿಂದ ನಿಯಮಬಾಹಿರ ನಿವೇಶನ ಪಡೆದುಕೊಂಡಿರುವ ಆರೋಪದ ಮೇಲೆ ರಾಜೀನಾಮೆ ನೀಡಿದ ತಕ್ಷಣವೇ 2ನೇ ಉಪ ಲೋಕಾಯುಕ್ತ ನ್ಯಾ. ಗುರುರಾಜನ್ ಕೂಡ ರಾಜೀನಾಮೆ ಸಲ್ಲಿಸಬೇಕಿತ್ತು.
ಆ ಸಂದರ್ಭದಲ್ಲೇ, 'ನಿವೇಶನ ವಿವಾದದ ಕಾರಣದಿಂದ ನೀವೂ ಪದತ್ಯಾಗಕ್ಕೆ ಸಿದ್ಧರಾಗಿದ್ದೀರಂತೆ?' ಎಂದು ಗುರುರಾಜನ್ ಅವರನ್ನು ಪ್ರಶ್ನಿಸಲಾಗಿತ್ತು. ಅದಕ್ಕೆ ಅವರು 'ಅಂತಹ ಪ್ರಮೇಯವೇನೂ ಇಲ್ಲ' ಎಂದು ತಳ್ಳಿಹಾಕಿದ್ದರು. ಆದರೆ 'ಈ ಬೆಳವಣಿಗೆಗಳಿಂದ ನೋವಾಗಿದೆ' ಎಂದು ಹೇಳಿಕೊಂಡಿದ್ದರು.
ಒಂದು ತಿಂಗಳ ಹಿಂದೆಯೇ ನ್ಯಾ. ಗುರುರಾಜನ್ ವಿರುದ್ಧ ಹೌಸಿಂಗ್ ಸೊಸೈಟಿ ನಿವೇಶನ ಹೊಂದಿರುವ ಆರೋಪ ಕೇಳಿಬಂದಾಗ ಅವರ ರಾಜೀನಾಮೆಗೆ ಒತ್ತಡ ಶುರುವಾಗಿತ್ತು. ಆದರೆ ರಾಜೀನಾಮೆ ಕೊಡಲು ನಿಧಾನಗತಿ ಅನುಸರಿಸಿದರು. ತಮ್ಮ ಹೆಸರಿನಲ್ಲಿರುವ ನಿವೇಶನಗಳ ಬಗ್ಗೆ ಕಾನೂನು ಸಲಹೆ ಪಡೆಯುತ್ತಾ ಕಾಲತಳ್ಳಿದರು. 'ಗೌರವಾನ್ವಿತ' ನಿರ್ಗಮನ ಬಯಸಿದ್ದರು.
ಆದರೆ, ಇನ್ನೇನು ತಮ್ಮ ಮೇಲಿನ ಈ ಆರೋಪ ಮಾಧ್ಯಮದ ಮೂಲಕ ಹೊರ ಜಗತ್ತಿಗೆ ಗೊತ್ತಾದರೆ ಕಳಂಕ ತಟ್ಟುತ್ತದೆ. ಅನಿವಾರ್ಯವಾಗಿ ರಾಜೀನಾಮೆ ಸಲ್ಲಿಸಬೇಕಾಗುತ್ತದೆ ಎನ್ನುವ ಆತಂಕಕ್ಕೆ ಬಿದ್ದರು. ಈ ಹಿನ್ನೆಲೆಯಲ್ಲೇ ಅವರು ಬುಧವಾರ ಯಾವುದೇ ಮುನ್ಸೂಚನೆಗಳಿಲ್ಲದೆ ದಿಢೀರ್ ರಾಜೀನಾಮೆ ಕೊಟ್ಟಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications