ಶ್ರೀರಾಮ ಸೇನೆ ನಿಷೇಧಕ್ಕೆ ದೇವೇಗೌಡರ ಆಗ್ರಹ

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಎಚ್.ಡಿ. ದೇವೇಗೌಡ, ದಾಳಿಗೆ ಕಾರಣವಾದ ಶ್ರೀರಾಮಸೇನೆ ಅಥವಾ ಇನ್ಯಾವುದೇ ಹಿಂದೂ ಸಂಘಟನೆಯನ್ನು ತಕ್ಷಣ ನಿಷೇಧಿಸಬೇಕು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಧಾನಿ ಮಂತ್ರಿ ಡಾ.ಮನಮೋಹನ್ಸಿಂಗ್ಗೆ ಪತ್ರ ಬರೆದಿರುವ ದೇವೇಗೌಡ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಆರಂಭದಲ್ಲಿಯೇ ಚರ್ಚ್ಗಳ ಮೇಲೆ ದಾಳಿ, ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆದಾಗ ಬಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧಿಸಲು ಸೂಚಿಸಲಾಗಿತ್ತು.
ಬೇಕೆಂದು ವಿನಂತಿಸಿದ್ದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಮಾಜಿ ಪ್ರಧಾನಿ, ಈಗ ಪ್ರಶಾಂತ್ ಭೂಷಣ್ ಮೇಲೆ ನಡೆದ ದಾಳಿಯ ಹಿನ್ನೆಲೆಯಲ್ಲಿ ದೇಶದ ಜಾತ್ಯತೀತ ಸ್ವರೂಪ, ಏಕತೆ, ಸಮಗ್ರತೆ ಮತ್ತು ಜನತಂತ್ರ ವ್ಯವಸ್ಥೆಗೆ ಮಾರಕವಾಗಿರುವ ಶ್ರೀರಾಮಸೇನೆ ಹಾಗೂ ಬಜರಂಗದಳವನ್ನು ತಕ್ಷಣವೇ ಕಾನೂನು ಬಾಹಿರ ಸಂಘಟನೆಗಳೆಂದು ಅಮಾನ್ಯ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಶಾಂತ್ ಭೂಷಣ್ರ ಮೇಲೆ ಗೂಂಡಾಗಿರಿ ತೋರಿಸಿರುವುದು ಇಡೀ ದೇಶಕ್ಕೆ ಅಘಾತವಾಗಿದೆ. ಸುಪ್ರೀಂ ಕೋರ್ಟ್ ಅಂಗಳದಲ್ಲೇ ಸಾಂವಿಧಾನಿಕ ಹಕ್ಕುಗಳ ಪ್ರತಿಪಾದಿಸುವ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಭದ್ರತಾ ವ್ಯವಸ್ಥೆಯ ಮೇಲೆ ಶಂಕೆ ವ್ಯಕ್ತವಾಗುತ್ತದೆ.
ಸಮಾಜಘಾತುಕ ಶಕ್ತಿಗಳ ಹೇಡಿತನದ ಕೃತ್ಯವಾಗಿದ್ದು, ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಬೆಲೆ ಇರಬೇಕು. ಈ ರೀತಿ ಅಡಗಿಸಲು ತೋಳ್ಬಲ ಪ್ರದರ್ಶಿಸುವುದು ಅಂಗೀಕಾರಾರ್ಹವಲ್ಲ. ದೇಶದ ಪ್ರಜಾಸತ್ತಾತ್ಮಕ ಮತ್ತು ವಾಕ್ ಸ್ವಾತಂತ್ರವನ್ನು ರಕ್ಷಿಸಿಕೊಳ್ಳುವಲ್ಲಿ ಬದ್ಧ ಎಂಬ ದಿಟ್ಟ ಸಂದೇಶವನ್ನು ಸಾರಬೇಕಿದೆ.
ಜನತಂತ್ರ ವಿರೋಧಿ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಪಾಠ ಕಲಿಸಲು ಇದು ಸಕಾಲ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪತ್ರದಲ್ಲಿ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications