ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಪರ-ವಿರೋಧಿ ಬಣಗಳ ವಾಕ್ಸಮರ

ಲೋಕಾಯುಕ್ತ ವರದಿ ಒಪ್ಪಿಕೊಂಡರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಕಷ್ಟವಾಗುತ್ತದೆ. ತಮ್ಮ ನಾಯಕರಾಗಿರುವ ಯಡಿಯೂರಪ್ಪ ಅವರಿಗೂ ತೊಂದರೆಯಾಗುತ್ತದೆ. ಆದ್ದರಿಂದ ವರದಿಯನ್ನು ತಕ್ಷಣವೇ ತಿರಸ್ಕರಿಸಬೇಕು ಎಂಬ ಒತ್ತಾಯವನ್ನು ಯಡಿಯೂರಪ್ಪ ಬಣ ಮುಂದಿಟ್ಟಿತ್ತು ಎನ್ನಲಾಗಿದೆ.
'2000ನೇ ಇಸವಿ ಜನವರಿ 1ರಿಂದಲೂ ನಡೆದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ನಡೆದ ಅಕ್ರಮಗಳ ಬಗ್ಗೆ ತನಿಖಾ ವರದಿಯಲ್ಲಿ ಹೆಚ್ಚಿನ ಪ್ರಸ್ತಾಪವೇ ಇಲ್ಲ. ಬಿಜೆಪಿ ಸರ್ಕಾರವನ್ನೇ ಗುರಿಯಾಗಿಸಿಕೊಂಡು ವರದಿ ನೀಡಿದಂತಿದೆ' ಎಂದು ಯಡಿಯೂರಪ್ಪ ಬಣದ ಕೆಲ ಸಚಿವರು ಹೇಳಿದರೆಂದು ಮೂಲಗಳು ತಿಳಿಸಿವೆ.












Click it and Unblock the Notifications