ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತ್ಯಾಗಜೀವಿ ಶಂಕರಪ್ಪ ಸಿಎಂಗಾಗಿ ಪಟ್ಟ ಬಿಟ್ಟನಪ್ಪ

By Mahesh
|
Google Oneindia Kannada News

MLC Shankarappa
ಬೆಂಗಳೂರು, ಅ.14: ವಿಧಾನಮಂಡಳದ ಉಭಯ ಸದನಗಳ ಸದಸ್ಯರಲ್ಲದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಸ್ಥಾನ ಕಲ್ಪಿಸುವ ಸಲುವಾಗಿ ತಾವು ವಿಧಾನ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ತ್ಯಾಗಜೀವಿ ಎನ್. ಶಂಕರಪ್ಪ ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಅವರ ವಿರೋಧದ ನಡುವೆಯೂ ರಾಯಚೂರಿನಿಂದ ಬೆಂಗಳೂರಿಗೆ ಹಾರಿ ಬಂದ ಎಂಎಲ್ ಸಿ ಶಂಕರಪ್ಪ ಅವರು ಶುಕ್ರವಾರ ಮಧ್ಯಾಹ್ನ ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರ ಮೂರ್ತಿ ಅವರಿಗೆ ನೀಡಿದರು.

ಪಕ್ಷದ ಹಿರಿಯ ನಾಯಕರ ನಿರ್ಧಾರ ಹಾಗೂ ಸಿಎಂಗೆ ಸ್ಥಾನ ಕಲ್ಪಿಸಿಕೊಡುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ ಎಂದು ಶಂಕರಪ್ಪ ಅವರು ಹೇಳಿದ್ದಾರೆ.

ಹಿಂದುಳಿದ ಆಯೋಗಕ್ಕೆ ಅಧ್ಯಕ್ಷ ದೊರಕುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ನಿಜ. ಪಕ್ಷ ನನಗೆ ಯಾವ ಸ್ಥಾನ ನೀಡುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ, ನಿಷ್ಠೆಯಿಂದ ನನ್ನ ಕರ್ತವ್ಯ ನಿಭಾಯಿಸುತ್ತೇನೆ ಎಂದು ಶಂಕರಪ್ಪ ಹೇಳಿದರು. ಅಲ್ಲಿ ಎಲ್ಲೂ ಯಡಿಯೂರಪ್ಪ ಬೆಂಬಲಿಗರ ಸುಳಿವಿರಲಿಲ್ಲ.

English summary
MLC Shankarappa has resigned from his post to make his way to CM DV Sadananda Gowda to to enter the Legislative Council through a bypoll. Shankarappa is offered state backward classes commission chairman post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X