ಅನಂತ ಪದ್ಮನಾಭಸ್ವಾಮಿ ಸಂಪತ್ತು 3ಡಿ ದೃಶ್ಯಗಳಲ್ಲಿ ದಾಖಲೆ

ದೇವಾಲಯದಲ್ಲಿ ಪತ್ತೆಯಾದ ಅಮೂಲ್ಯ ವಸ್ತುಗಳ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವುದು, ಅಮೂಲ್ಯ ನಿಧಿಯ ಕುರಿತಂತೆ ಕಂಪ್ಯೂಟರೀಕೃತ ಡಾಟಾಬೇಸ್ ರಚನೆ ಈ ದಾಖಲೀಕರಣ ಪ್ರಕ್ರಿಯೆಯಲ್ಲಿ ಒಳಗೊಂಡಿವೆ ಎಂದು ಸುಪ್ರೀಂಕೋರ್ಟ್ನಿಂದ ನೇಮಿಸಲ್ಪಟ್ಟ ತಜ್ಞರ ಸಮಿತಿಯು ಶನಿವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇರಳ ರಾಜ್ಯ ಎಲೆಕ್ಟ್ರಾನಿಕ್ ನಿಗಮವು ದಾಖಲೀಕರಣ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದೆ. ಇಸ್ರೋದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು ತಾಂತ್ರಿಕ ಪರಿಣತಿಯನ್ನು ಒದಗಿಸಲಿದೆ.
ಅನಂತಪದ್ಮನಾಭ ದೇವಾಲಯದ ನಿಧಿಯ ದಾಖಲೀಕರಣ ಕಾರ್ಯದ ಪೂರ್ತಿ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸಲಿದೆ. ದಾಖಲೀಕರಣ ಪ್ರಕ್ರಿಯೆಯನ್ನು ನವೆಂಬರ್ 9ರಂದು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಪೂರ್ವಸಿದ್ಧತೆಗಾಗಿ ನವೆಂಬರ್4ರಂದು ಇನ್ನೊಂದು ಸಭೆಯನ್ನು ಕರೆಯಲಾಗುವುದೆಂದು ತಜ್ಞರ ಸಮಿತಿಯ ಅಧ್ಯಕ್ಷರಾದ ಸಿವಿ ಆನಂದ ಬೋಸ್ ತಿಳಿಸಿದ್ದಾರೆ.
16ನೆ ಶತಮಾನದಷ್ಟು ಪುರಾತನವಾದ ಈ ದೇವಾಲಯದ ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳನ್ನು ತೆರೆಯಲಾಗಿದ್ದು, ಅವುಗಳಲ್ಲಿ ಚಿನ್ನ, ವಜ್ರ ಸೇರಿದಂತೆ ಒಂದು ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಸಂಪತ್ತು ಪತ್ತೆಯಾಗಿದೆ. ಆದರೆ ಬಿ ಕೊಠಡಿಯನ್ನು ಮಾತ್ರ ಇನ್ನೂ ತೆರೆಯಲಾಗಿಲ್ಲ.
ಬಿ ಕೊಠಡಿಯನ್ನು ತೆರೆಯುವ ವಿಚಾರದಲ್ಲಿ ತನ್ನದೇ ವಿವೇಚನೆಗನುಗುಣವಾಗಿ ನಡೆಯುವುದಾಗಿ ತಿಳಿಸಿರುವ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಅರ್ಚಕರ ಜತೆ ಸಮಾಲೋಚಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications