ಅನಂತ ಪದ್ಮನಾಭಸ್ವಾಮಿ ಸಂಪತ್ತು 3ಡಿ ದೃಶ್ಯಗಳಲ್ಲಿ ದಾಖಲೆ

ದೇವಾಲಯದಲ್ಲಿ ಪತ್ತೆಯಾದ ಅಮೂಲ್ಯ ವಸ್ತುಗಳ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವುದು, ಅಮೂಲ್ಯ ನಿಧಿಯ ಕುರಿತಂತೆ ಕಂಪ್ಯೂಟರೀಕೃತ ಡಾಟಾಬೇಸ್ ರಚನೆ ಈ ದಾಖಲೀಕರಣ ಪ್ರಕ್ರಿಯೆಯಲ್ಲಿ ಒಳಗೊಂಡಿವೆ ಎಂದು ಸುಪ್ರೀಂಕೋರ್ಟ್ನಿಂದ ನೇಮಿಸಲ್ಪಟ್ಟ ತಜ್ಞರ ಸಮಿತಿಯು ಶನಿವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇರಳ ರಾಜ್ಯ ಎಲೆಕ್ಟ್ರಾನಿಕ್ ನಿಗಮವು ದಾಖಲೀಕರಣ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದೆ. ಇಸ್ರೋದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು ತಾಂತ್ರಿಕ ಪರಿಣತಿಯನ್ನು ಒದಗಿಸಲಿದೆ.
ಅನಂತಪದ್ಮನಾಭ ದೇವಾಲಯದ ನಿಧಿಯ ದಾಖಲೀಕರಣ ಕಾರ್ಯದ ಪೂರ್ತಿ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸಲಿದೆ. ದಾಖಲೀಕರಣ ಪ್ರಕ್ರಿಯೆಯನ್ನು ನವೆಂಬರ್ 9ರಂದು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಪೂರ್ವಸಿದ್ಧತೆಗಾಗಿ ನವೆಂಬರ್4ರಂದು ಇನ್ನೊಂದು ಸಭೆಯನ್ನು ಕರೆಯಲಾಗುವುದೆಂದು ತಜ್ಞರ ಸಮಿತಿಯ ಅಧ್ಯಕ್ಷರಾದ ಸಿವಿ ಆನಂದ ಬೋಸ್ ತಿಳಿಸಿದ್ದಾರೆ.
16ನೆ ಶತಮಾನದಷ್ಟು ಪುರಾತನವಾದ ಈ ದೇವಾಲಯದ ನೆಲಮಾಳಿಗೆಯಲ್ಲಿರುವ ಆರು ರಹಸ್ಯ ಕೊಠಡಿಗಳನ್ನು ತೆರೆಯಲಾಗಿದ್ದು, ಅವುಗಳಲ್ಲಿ ಚಿನ್ನ, ವಜ್ರ ಸೇರಿದಂತೆ ಒಂದು ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಸಂಪತ್ತು ಪತ್ತೆಯಾಗಿದೆ. ಆದರೆ ಬಿ ಕೊಠಡಿಯನ್ನು ಮಾತ್ರ ಇನ್ನೂ ತೆರೆಯಲಾಗಿಲ್ಲ.
ಬಿ ಕೊಠಡಿಯನ್ನು ತೆರೆಯುವ ವಿಚಾರದಲ್ಲಿ ತನ್ನದೇ ವಿವೇಚನೆಗನುಗುಣವಾಗಿ ನಡೆಯುವುದಾಗಿ ತಿಳಿಸಿರುವ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಅರ್ಚಕರ ಜತೆ ಸಮಾಲೋಚಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications