ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಂ ಕೃಷ್ಣಗೆ ಗಣಿ ಔದಾರ್ಯ ಲೋಕಾ'ಯುಕ್ತ'ವೇ? ಬಿಜೆಪಿ ಸಮರ ಸನ್ನದ್ಧ

By Srinath
|
Google Oneindia Kannada News

sadananda-gowda
ಬೆಂಗಳೂರು, ಅ.17: ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ನೀಡಿದ ಮೊದಲ ವರದಿಯಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆದರೆ ಅಂತಿಮ ವರದಿಯಲ್ಲಿ ಸಿಂಗ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಮುಖಂಡರು ದೂರುತ್ತಿದ್ದಾರೆ.

ಅಲ್ಲದೆ, ಕೃಷ್ಣ ಆಡಳಿತಾವಧಿಯಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ಯಾವುದೇ ಕಾಂಗ್ರೆಸ್ ಮುಖಂಡರ ಹೆಸರು ಅಂತಿಮ ವರದಿಯಲ್ಲಿ ಇಲ್ಲ. ಹೀಗಾಗಿ ಲೋಕಾಯುಕ್ತರ ಅಂತಿಮ ವರದಿ ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರಿಯಾಗಿಟ್ಟುಕೊಂಡು ನೀಡಿದಂತಿದೆ ಎಂಬುದು ಅವರ ಅಳಲು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸೂಚನೆಯ ಮೇರೆಗೆ 2000ರಿಂದ 2008ರ ನಡುವಿನ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಗಣಿಗಾರಿಕೆ ಕುರಿತು ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು.

ಇದಕ್ಕೂ ಮುನ್ನ ಲೋಕಾಯುಕ್ತ 2004ರ ನಂತರ ನಡೆದ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿತ್ತು. 2000ನೇ ಇಸವಿಯ ಆರಂಭದಲ್ಲಿ ಕೃಷ್ಣ ಸರ್ಕಾರ ತೆಗೆದುಕೊಂಡ ಕೆಲವು ನಿರ್ಣಯಗಳ ಬಗ್ಗೆ ಲೋಕಾಯುಕ್ತರ ವರದಿಯಲ್ಲಿ ಅಲ್ಲಲ್ಲಿ ಪ್ರಸ್ತಾಪವಾಗಿದೆ.

English summary
The Karnataka BJP govt is all set take wage war on Comgress and implicate the SM Krishna Govt in the illegal mining cases. As such the govt may ask for a fresh report by new Lokayukta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X