ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಲಿತ ನಾಯಕ, ಮಾಜಿ ಶಾಸಕ ರಂಗನಾಥ್ ಇನ್ನಿಲ್ಲ

By Mahesh
|
Google Oneindia Kannada News

KH Ranganath demise
ಬೆಂಗಳೂರು, ಅ.18: ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಶಾಸಕ, ದಲಿತ ಮುಖಂಡ ಕೆಎಚ್ ರಂಗನಾಥ್ (86) ಅವರು ಕಿಡ್ನಿ ವೈಫಲ್ಯದಿಂದ ಮಂಗಳವಾರ ಬೆಳಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಂಗನಾಥ್ ಅವರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಂಗನಾಥ್ ಅವರನ್ನು ಕಿಡ್ನಿ ಡಯಾಲಿಸಿಸ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಅನುಯಾಯಿಯಾಗಿದ್ದ ರಂಗನಾಥ್ ಅವರು ಅರಸ್ ರಿಂದ ಹಿಡಿದು ಎಸ್ಎಮ್ ಕೃಷ್ಣ ಅವರ ಮಂತ್ರಿಮಂಡಲದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. 1972-74ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು.

ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಎಂಎಲ್ ಎ ಆಗಿ ಆಯ್ಕೆಯಾಗಿದ್ದರು. 1984-89 ರ ಅವಧಿಯಲ್ಲಿ ಲೋಕಸಭಾ ಸದಸ್ಯರಾಗಿ ಕೂಡಾ ಕಾರ್ಯ ನಿರ್ವಹಿಸಿದ್ದರು.

ರಾಜ್ಯ ಅಸೆಂಬ್ಲಿ ಸ್ಪೀಕರ್ ಆಗಿದ್ದ ಅವರು ಎಲ್ಲರೂ ಮೆಚ್ಚುವಂಥ ನಾಯಕರಾಗಿ ಗುರುತಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಅವರ ಸ್ವಂತ ಊರು ಹಿರಿಯೂರಿನಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿದೆ.

English summary
Veteran Congress leader and former Karnataka minister KH Ranganath died in Manipal Hospital Bangalore today(Oct.18). He was suffering from kidney disorder. Ranganth(86), is survived by two sons and four daughters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X