ಅಶೋಕ್ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

ಬೆಂಗಳೂರು ಉತ್ತರ ತಾಲ್ಲೂಕು ರಾಜಮಹಲ್ ವಿಲಾಸ್ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎಗೆ ಸೇರಿದ ನಿವೇಶನದ ಅಕ್ರಮ ಖರೀದಿ, 2009ರಲ್ಲಿ 9 ಎಕರೆಗೂ ಹೆಚ್ಚು ಜಮೀನಿನ ಅಕ್ರಮ ಡಿನೋಟಿಫಿಕೇಶನ್ ಮಾಡಿದ್ದಾರೆ.
ಇದರಿಂದ ಸರ್ಕಾರಕ್ಕೆ 50 ಕೋಟಿ ರು ನಷ್ಟವಾಗಿದೆ ಎಂದು ಪತ್ರಕರ್ತ ಜೈಕುಮಾರ್ ಹಿರೇಮಠ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ಲೋಕಾಯುಕ್ತ ವಿಶೇಷ ನ್ಯಾಯಮೂರ್ತಿ ಎನ್ ಕೆ ಸುಧೀಂದ್ರ ರಾವ್ ಅವರು ಗುರುವಾರ ಮಧ್ಯಾಹ್ನ ನಡೆಸಿದರು.
ಅರ್ ಪಿಸಿ ಸೆಕ್ಷನ್ 156 ಅಡಿಯಲ್ಲಿ ಆರ್ ಅಶೋಕ್ ವಿರುದ್ಧ ಲೋಕಾಯುಕ್ತ ಎಸ್ ಪಿಯಿಂದ ತನಿಖೆ ನಡೆಸಿ ನ.5 ರೊಳಗೆ ವರದಿ ನೀಡುವಂತೆ ನ್ಯಾಯಮೂರ್ತಿ ಸುಧೀಂದ್ರ ರಾವ್ ಸೂಚಿಸಿದ್ದಾರೆ.












Click it and Unblock the Notifications