ಸಂಘ ತತ್ವಗಳಿಗೆ ಎಳ್ಳುನೀರು ಬಿಟ್ಟಿದ್ದೇ ಭ್ರಷ್ಟಾಚಾರಕ್ಕೆ ಕಾರಣ

ಬೆಂಗಳೂರು, ಅ. 23: 'ಸಂಘ'ದಿಂದ ಬಂದ ಮಾಜಿ ಸಿಎಂ ಯಡಿಯೂರಪ್ಪ ಅವರೇ ಇರಬಹುದು ಅಥವಾ ಇನ್ಯಾರೇ ಇರಬಹುದು. ಅಂತಹ ಭ್ರಷ್ಟರು 'ಸಂಘ'ದ ಮೂಲತತ್ವಗಳಿಗೆ ಎಳ್ಳುನೀರು ಬಿಟ್ಟಿದ್ದೇ ಈಗಿನ ಅಹಿತಕರ ಪರಿಸ್ಥಿತಿಗೆ ಮುಖ್ಯ ಕಾರಣ ಎಂದು ಇಂದಿನ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆರೆಸ್ಸೆಸ್ ಷರಾ ಬರೆದಿದೆ.

ಆದರೆ, ಭ್ರಷ್ಟಾಚಾರಿಗಳು ಯಾವುದೇ ಪಕ್ಷದವರಾಗಿದ್ದರೂ, ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರೆಸ್ಸೆಸ್ ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಂಘ'ದಿಂದ ಬಂದ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಕೆಲ ಸಚಿವರು ಮತ್ತು ಶಾಸಕರು ಹಗರಣಗಳ ಆರೋಪ ಹೊತ್ತು ಕಾರಾಗೃಹ ಸೇರುತ್ತಿದ್ದಾರೆ. ಇದರಿಂದ ಪರಿವಾರಕ್ಕೆ ತೀವ್ರ ಮುಜುಗರವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸಂಘ ಪರಿವಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟ ಮುಂದುವರಿಸುತ್ತದೆ. ಭ್ರಷ್ಟಾಚಾರದಲ್ಲಿ ತೊಡಗಿರುವವರು ನೈತಿಕ ಹೊಣೆ ಹೊರಬೇಕು. ಮಾತ್ರವಲ್ಲ ಆತ್ಮಾವಲೋಕನ ಮಾಡಿಕೊಳ್ಳುವುದು ಸೂಕ್ತ ಎಂದ ಅವರು, ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸ ಮಾಡಿದೆ. ಆದರೆ, ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ನುಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+