ದೊಡ್ಡಬಳ್ಳಾಪುರ-ಬೆಂಗಳೂರು ದ್ವಿಪಥ ರಸ್ತೆಗೆ ಶಾಸಕ ನರಸಿಂಹಸ್ವಾಮಿ ಆಗ್ರಹ

bangalore-db-pur-demand-for-two-lane-expressway
ದೊಡ್ಡಬಳ್ಳಾಪುರ, ಅ. 25: ಭಾರತದ ಮ್ಯಾಂಚೆಸ್ಟರ್ ಎಂಬ ಖ್ಯಾತಿ ಗಳಿಸಿರುವ ದೊಡ್ಡಬಳ್ಳಾಪು ಹಾಗೂ ಬೆಂಗಳೂರು ನಡುವಿನ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸುವಂತೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಅಧ್ಯಕ್ಷ, ದೊಡ್ಡಬಳ್ಳಾಪುರ ಶಾಸಕ ಜಾಲಪ್ಪ ನರಸಿಂಹಸ್ವಾಮಿ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದ ಜವಳಿ ಮತ್ತು ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸಲು ಪ್ರತಿ ದಿನವೂ 20 ಸಾವಿರಕ್ಕೂ ಹೆಚ್ಚು ಮಂದಿ, ವಿಶೇಷವಾಗಿ ಮಹಿಳಾ ಉದ್ಯೋಗಿಗಳು ಪ್ರಯಾಣ ಮಾಡುತ್ತಾರೆ. ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಪ್ರತಿ ದಿನವೂ 50,000 ವಾಹನಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳ ತಡೆಯಲು ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ನಡುವೆ ದ್ವಿಪಥ ರಸ್ತೆಯ ನಿರ್ಮಾಣ ಅತ್ಯಾವಶ್ಯಕ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದರ್ಗಾ ಜೋಗಿಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಘಾಟಿ ಸುಬ್ರಮಣ್ಯ ಕೇತ್ರದ ಬಳಿ ಇರುವ ವಿಶ್ವೇಶ್ವರಯ್ಯ ಪಿಕ್ ಅಪ್ ಪುನಶ್ಚೇತನ ಯೋಜನೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ ನರಸಿಂಹಸ್ವಾಮಿ, ಇದರಿಂದ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ದಿನದ 24 ಗಂಟೆಗಳೂ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+